ಬಂಗಾರಪೇಟೆ: ಕರ್ನಾಟಕ ಸರ್ಕಾರ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಬಂಗಾರಪೇಟೆಯ ಮಾಗೊಂದಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ
ಬಂಗಾರಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ರಾಜ್ಯವ್ಯಪ್ತಿ ಆರೋಗ್ಯ ಇಲಾಖೆ ನಿರಂತರ ತಪಾಸಣೆ ನಡೆಸುತ್ತಿದ್ದಾರೆ, ಹಲವು ಕಡೆ ಕಳಪೆ ನಕಲಿ ಗುಣಮಟ್ಟದ ಆನೇಕ ಬಗೆಯ ಕಳಪೆ ಔಷಧಿಗಳು ಸಿಕ್ಕಿರುವ ಮಾಹಿತಿ ಗಮನಕ್ಕ್ ಬಂದಿದೆ ಔಷಧಿ ಪರಿವೀಕ್ಷಕ ಅಧಿಕಾರಿಗಳ ತೀವ್ರ ಕೊರತೆ ಕರ್ನಾಟಕ ಎದುರಿಸುತ್ತಿದೆ. ಇದರ ಪರಿಣಾಮ, ಕಳಪೆ ಗುಣಮಟ್ಟದ ಔಷಧಿ ಪೂರೈಕೆ ಜಾಲವನ್ನು ನಿರ್ಮೂಲನೆ ಗೊಳಿಸುವ ಯತ್ನಕ್ಕೆ ತೊಂದರೆ ಉಂಟಾಗಿದ್ದು, ಇಲಾಖೆ ಈಗಾಗಲೇ ಇದರ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಖಾಲಿ ಇರುವ ಔಷಧಿ ಪರಿವೀಕ್ಷಕ ಅಧಿಕಾರಿ ಗಳನ್ನು ನೇಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಮತ್ತು ಡಿ-ಗ್ರೂಪ್ ನೌಕರರ ಕೊರತೆ ಇದ್ದು ಹಾಗು ಸ್ಕ್ಯಾನಿಂಗ್ ಟೆಕ್ನಿಷಿಯನ್ ಗಳ ಕೊರತೆ ಸಹಾ ಇದ್ದು ಖಾಸಗಿ ಆಸ್ಪತ್ರೆ ಟಿಕ್ನಿಷಿಯನ್ ವಾರಕ್ಕೊಮ್ಮೆ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿ ಕೆಲಸ ಮಾಡಲು ಇಚ್ಚಿಸಿದವರಿಗೆ ಒಳ್ಳೆಯ ಸಂಬಳ ನೀಡಲಾಗುವುದು ಇದರ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದೇನೆ, ಮುಖ್ಯಮಂತ್ರಿಗಳ ಅನುಮೋದನೆ ಸಿಕ್ಕ ಕೂಡಲೇ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಸಿಬ್ಬಂದಿಗಳನ್ನು ನೇಮಕ ಮಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕರಾದ ಶ್ರೀ. ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ , ಆಸ್ಪತ್ರೆಯ ಆಡಳಿತಾಧಿಕಾರಿ ಡಾಕ್ಟರ್ ಭಾರತಿ, ಡಾಕ್ಟರ ಸುಧಾಕರ್, ಮತ್ತು ಸಾರ್ವಜನಿಕರು ಹಾಜರಿದ್ದರು. ವರದಿ: ರೋಶನ್ ಜಮೀರ್
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…