ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಸತ್ಕಾರ್ಯಗಳು ನಡೆಯುತ್ತವೆ. ಎಂದರೇ ಯಾರಿಗೇ ಆಗಲೀ ಖುಷಿ ಆಗುತ್ತದೆ. ಹಾಗೆಯೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಕರ್ಕಿ ಬಸವೇಶ್ವರ ನಗರದಲ್ಲಿ ಕಳೆದ 2017 ರಲ್ಲಿ ಅಂದಾಜು 2 ಕೋಟಿ ರೂ ಗಳ ವೆಚ್ಚದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿತ್ತು ಆದರೇ ಅದೂ ಕೇವಲ 4-5 ವರ್ಷದಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಹಾಗೂ ಸಂಪೂರ್ಣ ಕಳಪೆ ಕಾಮಗಾರಿಯಾಗಿರುವುದು ನಿಜಕ್ಕೂ ಬೇಸರವಾಗುತ್ತಿದೆ.
ಹೌದು ಈ ಸಮುದಾಯ ಭವನ ನಿರ್ಮಾಣವಾದ ಮೇಲೆ ತುಂಬಾ ಸುಂದರವಾಗಿ ಕಾಣುತ್ತಿತ್ತು. ಆದರೇ ಇತ್ತೀಚಿನ ದಿನಗಳಲ್ಲಿ ಅಲ್ಲಿ ಸಮುದಾಯ ಭವನದ ಕಡೆ ಸಂಬಂಧ ಪಟ್ಟ ಯಾವ ಅಧಿಕಾರಿಗಳೂ ಗಮನ ಹರಿಸುತ್ತಿಲ್ಲ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಹಾಗೂ ಕಿಡಕಿಯ ಗಾಜೂ ಒಡೆದಿವೆ. ಇನ್ನೂ ಮಳೆ ಬಂದರೆ ಮುಗೀತು. ಮಳೆಯ ನೀರು ಸಮುದಾಯ ಭವನದ ಒಳಗೆ ಬರುತ್ತದೆ ಅದರಿಂದ ಕಟ್ಟಡದ ಒಳಗಡೆ ಮಳೆ ನೀರಿನಿಂದ ಹಾಗೂ ಕಿಡಕಿಯಿಂದ ಕಸ ಬಿದ್ದು ಸ್ವಚ್ಛತೆ ಇಲ್ಲದಂತಾಗಿದೆ ಕೆಲ ಕಿಡಿಗೇಡಿಗಳು ಕಟ್ಟಡದ ಗೋಡೆಗಳ ಮೇಲೆ ಎಲೆ ಅಡಿಕೆ, ಗುಟ್ಕಾ ತಿಂದು ಉಗುಳಿದ್ದಾರೆ ಈ ಕಟ್ಟಡದ ಒಳಗಡೆ ಹೋಗಬೇಕೆಂದರೆ ಒಂದು ಕಡೆ ಸರಿಯಾದ ಮೆಟ್ಟಿಲುಗಳೇ ಇಲ್ಲಾ ತುಂಬಾ ಮಣ್ಣಿನ ಧೂಳಿನಿಂದ ಕೂಡಿದೆ ಇನ್ನೂ ಸಮುದಾಯ ಭವನದ ಅಕ್ಕ ಪಕ್ಕದಲ್ಲಿ ಸ್ವಚ್ಛತೆಯೇ ಇಲ್ಲಾ ಕಟ್ಟಡದ ಎದುರು ಮಳೆ ಬಂದಾಗ ಕೆಸರಿನಿಂದ ತುಂಬಿರುತ್ತದೆ ಇಷ್ಟೆಲ್ಲಾ ಸಮಸ್ಯೆಗಳಿರುವ ಕಾರಣ ಸಂಬಂಧ ಪಟ್ಟ ಅಧಿಕಾರಿಗಳು ಇನ್ನು ಮೇಲಾದರೂ ಎಚ್ಚೆತ್ತುಕೊಂಡು ಅವ್ಯವಸ್ಥೆಯಿಂದ ಕೂಡಿದ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ವ್ಯೆವಸ್ಥಿತ ವಾಗಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…