ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಸತ್ಕಾರ್ಯಗಳು ನಡೆಯುತ್ತವೆ. ಎಂದರೇ ಯಾರಿಗೇ ಆಗಲೀ ಖುಷಿ ಆಗುತ್ತದೆ. ಹಾಗೆಯೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಕರ್ಕಿ ಬಸವೇಶ್ವರ ನಗರದಲ್ಲಿ ಕಳೆದ 2017 ರಲ್ಲಿ ಅಂದಾಜು 2 ಕೋಟಿ ರೂ ಗಳ ವೆಚ್ಚದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿತ್ತು ಆದರೇ ಅದೂ ಕೇವಲ 4-5 ವರ್ಷದಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಹಾಗೂ ಸಂಪೂರ್ಣ ಕಳಪೆ ಕಾಮಗಾರಿಯಾಗಿರುವುದು ನಿಜಕ್ಕೂ ಬೇಸರವಾಗುತ್ತಿದೆ.
ಹೌದು ಈ ಸಮುದಾಯ ಭವನ ನಿರ್ಮಾಣವಾದ ಮೇಲೆ ತುಂಬಾ ಸುಂದರವಾಗಿ ಕಾಣುತ್ತಿತ್ತು. ಆದರೇ ಇತ್ತೀಚಿನ ದಿನಗಳಲ್ಲಿ ಅಲ್ಲಿ ಸಮುದಾಯ ಭವನದ ಕಡೆ ಸಂಬಂಧ ಪಟ್ಟ ಯಾವ ಅಧಿಕಾರಿಗಳೂ ಗಮನ ಹರಿಸುತ್ತಿಲ್ಲ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಹಾಗೂ ಕಿಡಕಿಯ ಗಾಜೂ ಒಡೆದಿವೆ. ಇನ್ನೂ ಮಳೆ ಬಂದರೆ ಮುಗೀತು. ಮಳೆಯ ನೀರು ಸಮುದಾಯ ಭವನದ ಒಳಗೆ ಬರುತ್ತದೆ ಅದರಿಂದ ಕಟ್ಟಡದ ಒಳಗಡೆ ಮಳೆ ನೀರಿನಿಂದ ಹಾಗೂ ಕಿಡಕಿಯಿಂದ ಕಸ ಬಿದ್ದು ಸ್ವಚ್ಛತೆ ಇಲ್ಲದಂತಾಗಿದೆ ಕೆಲ ಕಿಡಿಗೇಡಿಗಳು ಕಟ್ಟಡದ ಗೋಡೆಗಳ ಮೇಲೆ ಎಲೆ ಅಡಿಕೆ, ಗುಟ್ಕಾ ತಿಂದು ಉಗುಳಿದ್ದಾರೆ ಈ ಕಟ್ಟಡದ ಒಳಗಡೆ ಹೋಗಬೇಕೆಂದರೆ ಒಂದು ಕಡೆ ಸರಿಯಾದ ಮೆಟ್ಟಿಲುಗಳೇ ಇಲ್ಲಾ ತುಂಬಾ ಮಣ್ಣಿನ ಧೂಳಿನಿಂದ ಕೂಡಿದೆ ಇನ್ನೂ ಸಮುದಾಯ ಭವನದ ಅಕ್ಕ ಪಕ್ಕದಲ್ಲಿ ಸ್ವಚ್ಛತೆಯೇ ಇಲ್ಲಾ ಕಟ್ಟಡದ ಎದುರು ಮಳೆ ಬಂದಾಗ ಕೆಸರಿನಿಂದ ತುಂಬಿರುತ್ತದೆ ಇಷ್ಟೆಲ್ಲಾ ಸಮಸ್ಯೆಗಳಿರುವ ಕಾರಣ ಸಂಬಂಧ ಪಟ್ಟ ಅಧಿಕಾರಿಗಳು ಇನ್ನು ಮೇಲಾದರೂ ಎಚ್ಚೆತ್ತುಕೊಂಡು ಅವ್ಯವಸ್ಥೆಯಿಂದ ಕೂಡಿದ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ವ್ಯೆವಸ್ಥಿತ ವಾಗಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…