Latest

ಕಳಪೆ ಕಾಮಗಾರಿಯಾದ ಹುಬ್ಬಳ್ಳಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ!

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಹಲವಾರು ಸತ್ಕಾರ್ಯಗಳು ನಡೆಯುತ್ತವೆ. ಎಂದರೇ ಯಾರಿಗೇ ಆಗಲೀ ಖುಷಿ ಆಗುತ್ತದೆ. ಹಾಗೆಯೇ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಕರ್ಕಿ ಬಸವೇಶ್ವರ ನಗರದಲ್ಲಿ ಕಳೆದ 2017 ರಲ್ಲಿ ಅಂದಾಜು 2 ಕೋಟಿ ರೂ ಗಳ ವೆಚ್ಚದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿತ್ತು ಆದರೇ ಅದೂ ಕೇವಲ 4-5 ವರ್ಷದಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಹಾಗೂ ಸಂಪೂರ್ಣ ಕಳಪೆ ಕಾಮಗಾರಿಯಾಗಿರುವುದು ನಿಜಕ್ಕೂ ಬೇಸರವಾಗುತ್ತಿದೆ.


ಹೌದು ಈ ಸಮುದಾಯ ಭವನ ನಿರ್ಮಾಣವಾದ ಮೇಲೆ ತುಂಬಾ ಸುಂದರವಾಗಿ ಕಾಣುತ್ತಿತ್ತು. ಆದರೇ ಇತ್ತೀಚಿನ ದಿನಗಳಲ್ಲಿ ಅಲ್ಲಿ ಸಮುದಾಯ ಭವನದ ಕಡೆ ಸಂಬಂಧ ಪಟ್ಟ ಯಾವ ಅಧಿಕಾರಿಗಳೂ ಗಮನ ಹರಿಸುತ್ತಿಲ್ಲ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಹಾಗೂ ಕಿಡಕಿಯ ಗಾಜೂ ಒಡೆದಿವೆ. ಇನ್ನೂ ಮಳೆ ಬಂದರೆ ಮುಗೀತು. ಮಳೆಯ ನೀರು ಸಮುದಾಯ ಭವನದ ಒಳಗೆ ಬರುತ್ತದೆ ಅದರಿಂದ ಕಟ್ಟಡದ ಒಳಗಡೆ ಮಳೆ ನೀರಿನಿಂದ ಹಾಗೂ ಕಿಡಕಿಯಿಂದ ಕಸ ಬಿದ್ದು ಸ್ವಚ್ಛತೆ ಇಲ್ಲದಂತಾಗಿದೆ ಕೆಲ ಕಿಡಿಗೇಡಿಗಳು ಕಟ್ಟಡದ ಗೋಡೆಗಳ ಮೇಲೆ ಎಲೆ ಅಡಿಕೆ, ಗುಟ್ಕಾ ತಿಂದು ಉಗುಳಿದ್ದಾರೆ ಈ ಕಟ್ಟಡದ ಒಳಗಡೆ ಹೋಗಬೇಕೆಂದರೆ ಒಂದು ಕಡೆ ಸರಿಯಾದ ಮೆಟ್ಟಿಲುಗಳೇ ಇಲ್ಲಾ ತುಂಬಾ ಮಣ್ಣಿನ ಧೂಳಿನಿಂದ ಕೂಡಿದೆ ಇನ್ನೂ ಸಮುದಾಯ ಭವನದ ಅಕ್ಕ ಪಕ್ಕದಲ್ಲಿ ಸ್ವಚ್ಛತೆಯೇ ಇಲ್ಲಾ ಕಟ್ಟಡದ ಎದುರು ಮಳೆ ಬಂದಾಗ ಕೆಸರಿನಿಂದ ತುಂಬಿರುತ್ತದೆ ಇಷ್ಟೆಲ್ಲಾ ಸಮಸ್ಯೆಗಳಿರುವ ಕಾರಣ ಸಂಬಂಧ ಪಟ್ಟ ಅಧಿಕಾರಿಗಳು ಇನ್ನು ಮೇಲಾದರೂ ಎಚ್ಚೆತ್ತುಕೊಂಡು ಅವ್ಯವಸ್ಥೆಯಿಂದ ಕೂಡಿದ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನವನ್ನು ವ್ಯೆವಸ್ಥಿತ ವಾಗಿ ಸರಿಪಡಿಸುತ್ತಾರಾ ಕಾದು ನೋಡಬೇಕಾಗಿದೆ.

ವರದಿ: ಶಿವರಾಜ್

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

4 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

4 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

4 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

5 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

8 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago