ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಹಿಟ್ಲರ್ಗೆ ಹೋಲಿಸಿ ಸಮಾಜ ಮಾಧ್ಯಮದಲ್ಲಿ ಬಿಜೆಪಿ ಬೆಂಬಲಿಗರೊಬ್ಬರು ಹಾಕಿರುವ ವಿವಾದಾತ್ಮಕ ಪೋಸ್ಟ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಪೋಸ್ಟ್ನಲ್ಲಿರುವ ಅವಹೇಳನಕಾರಿ ತತ್ತ್ವಗಳನ್ನು ಖಂಡಿಸುತ್ತಾ, ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಇಂದಿರಾ ಗಾಂಧಿಯವರ ತ್ಯಾಗ, ರಾಜಕೀಯ ದಕ್ಷತೆ ಹಾಗೂ ರಾಷ್ಟ್ರಕ್ಕಾಗಿ ಸಲ್ಲಿಸಿದ ಕೊಡುಗೆಗಳನ್ನು ಸ್ಮರಿಸಿದ ಅವರು, ಇಂತಹ ಪೋಸ್ಟ್ಗಳು ಐತಿಹಾಸಿಕ ಸತ್ಯವನ್ನು ಮರೆಮಾಡುವ ಪ್ರಯತ್ನ ಎಂದು ಆರೋಪಿಸಿದರು.
ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತುಸಿದ್ದು, ವಾಹನ ಸಂಚಾರಕ್ಕೂ ಅಡ್ಡಿಪಡಿಸಿದರು. ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಿಗದಿತ ಸ್ಥಳಕ್ಕೆ ಸ್ಥಳಾಂತರಿಸಿದರು.
“ಇಂದಿರಾ ಗಾಂಧಿಯವರ ಕುರಿತು ಅವಮಾನಕಾರಿ ಹೇಳಿಕೆಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ,” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾಯಕರು ಎಚ್ಚರಿಸಿದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…