Latest

ಉಡುಪಿ ಕಾಲೇಜು ವಿಡಿಯೋ ವಿವಾದ ವಿರುದ್ಧ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅರೆಸ್ಟ್!

ಉಡುಪಿ ನಗರದ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ವಿಚಾರದ ಕುರಿತಾಗಿ ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಶಕುಂತಲಾ (ಬಿಜೆಪಿ ಕಾರ್ಯಕರ್ತೆ) ಶೇರ್ ಮಾಡಿ ಮರು ಟ್ವೀಟ್‌ ಮೂಲಕ ಪೋಸ್ಟ್ ಮಾಡಿದ್ದರು.
ಜೊತೆಗೆ, ಟ್ವೀಟ್‌ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳುತ್ತಿದ್ದರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲಾಳನ್ನ ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನವಾದ ಬೆನ್ನಲ್ಲಿಯೇ ಹಲವು ಬಿಜೆಪಿ ನಾಯಕರು ಪೊಲೀಸ್‌ ಠಾಣೆಗೆ ತೆರಳಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಂತರ, ಸ್ಟೇಷನ್ ಬೇಲ್ ಮೇಲೆ ಶಕುಂತಲಾ ಅವರನ್ನು ಬಿಡುಗಡೆ ಮಾಡಲಾಗಿದೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

13 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

18 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

18 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

18 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

18 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

18 hours ago