ಉಡುಪಿ ನಗರದ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ವಿಚಾರದ ಕುರಿತಾಗಿ ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಶಕುಂತಲಾ (ಬಿಜೆಪಿ ಕಾರ್ಯಕರ್ತೆ) ಶೇರ್ ಮಾಡಿ ಮರು ಟ್ವೀಟ್ ಮೂಲಕ ಪೋಸ್ಟ್ ಮಾಡಿದ್ದರು.
ಜೊತೆಗೆ, ಟ್ವೀಟ್ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳುತ್ತಿದ್ದರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲಾಳನ್ನ ಬಂಧಿಸಿದ್ದಾರೆ.
ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನವಾದ ಬೆನ್ನಲ್ಲಿಯೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಂತರ, ಸ್ಟೇಷನ್ ಬೇಲ್ ಮೇಲೆ ಶಕುಂತಲಾ ಅವರನ್ನು ಬಿಡುಗಡೆ ಮಾಡಲಾಗಿದೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…