ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್. ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.
ವರದಿ: ಮಂಜುನಾಥ್ ಎಫ್.ಎಚ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…