Latest

ಅಡಿಕೆ ಬೆಳೆಗೆ ಅಂಟಿದ ಕೊಳೆ ರೋಗ; ಮುನ್ನೆಚ್ಚರಿಕೆ ವಹಿಸಲು ಸೂಚನೆ.

ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್‌ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್.‌ ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.

ವರದಿ: ಮಂಜುನಾಥ್ ಎಫ್.ಎಚ್ 
ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago