Latest

ಅಡಿಕೆ ಬೆಳೆಗೆ ಅಂಟಿದ ಕೊಳೆ ರೋಗ; ಮುನ್ನೆಚ್ಚರಿಕೆ ವಹಿಸಲು ಸೂಚನೆ.

ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್‌ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್.‌ ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.

ವರದಿ: ಮಂಜುನಾಥ್ ಎಫ್.ಎಚ್ 
ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago