Latest

ಅಡಿಕೆ ಬೆಳೆಗೆ ಅಂಟಿದ ಕೊಳೆ ರೋಗ; ಮುನ್ನೆಚ್ಚರಿಕೆ ವಹಿಸಲು ಸೂಚನೆ.

ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್‌ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್.‌ ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.

ವರದಿ: ಮಂಜುನಾಥ್ ಎಫ್.ಎಚ್ 
ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago