Latest

ಆರು ತಿಂಗಳಿಂದ ತಾಯಿ-ತಂದೆ ಭೇಟಿಯಾಗಿಲ್ಲ- ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಮತ್ತು ಮಹಿಳೆಯ ಗೌಪ್ಯತೆ ಉಲ್ಲಂಘನೆಯ ಗಂಭೀರ ಪ್ರಕರಣದಲ್ಲಿ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ದೇಶಾದ್ಯಂತ ಕೇವಲ ರಾಜಕೀಯ ವಲಯದಲ್ಲಿ ಅಲ್ಲ, ಇಡೀ ಸಮಾಜದಲ್ಲೇ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದ ವಿಚಾರಣೆ ಬಳಿಕ, ಕಾನೂನು ತನ್ನ ಕರಾಳ ರೂಪ ತೋರಿಸಿದೆ.

ತೀರ್ಪು ಪ್ರಕಟವಾದ ಬಳಿಕ ಕೋರ್ಟ್ ಹಾಜರಾದ ಪ್ರಜ್ವಲ್ ರೇವಣ್ಣ, ಕಣ್ಣೀರು ಹಾಕುತ್ತಾ ದಯೆಯ ಮಂಡಿಸಿದರು. “ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಕೈಕ ತಪ್ಪೆಂದರೆ ರಾಜಕೀಯದಲ್ಲಿ ವೇಗವಾಗಿ ಬೆಳೆಯುವುದು” ಎಂದು ನ್ಯಾಯಮೂರ್ತಿಯ ಎದುರು ಭಾವನಾತ್ಮಕವಾಗಿ ಮಾತನಾಡಿದ ಅವರು, “ದಯವಿಟ್ಟು ನನಗೆ ಕಡಿಮೆ ಶಿಕ್ಷೆ ವಿಧಿಸಿ” ಎಂದು ಬೇಡಿಕೆ ಇಟ್ಟರು.

ಪ್ರಜ್ವಲ್ ರೇವಣ್ಣ ತಮ್ಮ ನ್ಯಾಯಾಲಯದ ಹೇಳಿಕೆಯಲ್ಲಿ, ತಮ್ಮ ಮೇಲೆ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸತ್ತಿಲ್ಲದ ಸಹಿತ ಮಹಿಳೆಯರು ದೂರು ನೀಡಿರುವುದು ಸಂಶಯಾಸ್ಪದವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. “ಅನೇಕ ಮಹಿಳೆಯರು ದೂರು ನೀಡಿದರು ಎನ್ನುತ್ತಾರೆ. ಆದರೆ ಯಾರೂ ಸ್ವಯಂಪ್ರೇರಣೆಯಿಂದ ದೂರು ನೀಡಿಲ್ಲ. ಎಲ್ಲರೂ ಚುನಾವಣೆಗೆ ಆರು ದಿನಗಳ ಮುಂಚೆ ಬಂದಿದ್ದಾರೆ. ಇದೊಂದು ನಾಟಕ” ಎಂದು ಅವರು ಆರೋಪಿಸಿದರು.

“ನಾನು ಬಿಇ ಮೆಕ್ಯಾನಿಕಲ್ ಪದವೀಧರ, ಕಳೆದ ಆರು ತಿಂಗಳಿಂದ ನನ್ನ ತಾಯಿ-ತಂದೆ ಯಾರನ್ನೂ ನೋಡಿಲ್ಲ. ನನ್ನ ಕುಟುಂಬದವರಿಂದ ದೂರವಾಗಿದ್ದೇನೆ. ಇದು ನನ್ನ ಜೀವನದ ಅತೀವ ಕಷ್ಟದ ಸಮಯ” ಎಂದು ತಮ್ಮ ಆಂತರಿಕ ದುಃಖವನ್ನು ಶೇರ್ ಮಾಡಿಕೊಂಡರು.

ಈ ನಡುವೆ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದಗಳು ಬಹಳ ಬಲವಾಗಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿತ್ತು. ಪರಿಣಾಮವಾಗಿ ನ್ಯಾಯಾಲಯವು ಯಾವುದೇ ರಿಯಾಯಿತಿ ನೀಡದೆ ಜೀವಾವಧಿ ಶಿಕ್ಷೆ ಘೋಷಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ದೊಡ್ಡ ಆತಂಕ ಮೂಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬದ ಸದಸ್ಯನಾದ ಪ್ರಜ್ವಲ್ ವಿರುದ್ಧ ಈ ತೀರ್ಪು ಜೆಡಿಎಸ್‌ಗೆ ಭಾರೀ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಬಹುದೆಂಬ ಅಂದಾಜು ವ್ಯಕ್ತವಾಗುತ್ತಿದೆ.

nazeer ahamad

Recent Posts

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

4 days ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

4 days ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

4 days ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

5 days ago

ಸಾಧುಗಳ ವೇಷ ತಾಳಿ ರೈತನ ಚಿನ್ನದ ಉಂಗುರ ದೋಚಿದ ಐವರ ಗ್ಯಾಂಗ್‌ ಬಂಧನ”

ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…

5 days ago

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

3 weeks ago