Latest

ಆರು ತಿಂಗಳಿಂದ ತಾಯಿ-ತಂದೆ ಭೇಟಿಯಾಗಿಲ್ಲ- ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಮತ್ತು ಮಹಿಳೆಯ ಗೌಪ್ಯತೆ ಉಲ್ಲಂಘನೆಯ ಗಂಭೀರ ಪ್ರಕರಣದಲ್ಲಿ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ದೇಶಾದ್ಯಂತ ಕೇವಲ ರಾಜಕೀಯ ವಲಯದಲ್ಲಿ ಅಲ್ಲ, ಇಡೀ ಸಮಾಜದಲ್ಲೇ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದ ವಿಚಾರಣೆ ಬಳಿಕ, ಕಾನೂನು ತನ್ನ ಕರಾಳ ರೂಪ ತೋರಿಸಿದೆ.

ತೀರ್ಪು ಪ್ರಕಟವಾದ ಬಳಿಕ ಕೋರ್ಟ್ ಹಾಜರಾದ ಪ್ರಜ್ವಲ್ ರೇವಣ್ಣ, ಕಣ್ಣೀರು ಹಾಕುತ್ತಾ ದಯೆಯ ಮಂಡಿಸಿದರು. “ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಕೈಕ ತಪ್ಪೆಂದರೆ ರಾಜಕೀಯದಲ್ಲಿ ವೇಗವಾಗಿ ಬೆಳೆಯುವುದು” ಎಂದು ನ್ಯಾಯಮೂರ್ತಿಯ ಎದುರು ಭಾವನಾತ್ಮಕವಾಗಿ ಮಾತನಾಡಿದ ಅವರು, “ದಯವಿಟ್ಟು ನನಗೆ ಕಡಿಮೆ ಶಿಕ್ಷೆ ವಿಧಿಸಿ” ಎಂದು ಬೇಡಿಕೆ ಇಟ್ಟರು.

ಪ್ರಜ್ವಲ್ ರೇವಣ್ಣ ತಮ್ಮ ನ್ಯಾಯಾಲಯದ ಹೇಳಿಕೆಯಲ್ಲಿ, ತಮ್ಮ ಮೇಲೆ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸತ್ತಿಲ್ಲದ ಸಹಿತ ಮಹಿಳೆಯರು ದೂರು ನೀಡಿರುವುದು ಸಂಶಯಾಸ್ಪದವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. “ಅನೇಕ ಮಹಿಳೆಯರು ದೂರು ನೀಡಿದರು ಎನ್ನುತ್ತಾರೆ. ಆದರೆ ಯಾರೂ ಸ್ವಯಂಪ್ರೇರಣೆಯಿಂದ ದೂರು ನೀಡಿಲ್ಲ. ಎಲ್ಲರೂ ಚುನಾವಣೆಗೆ ಆರು ದಿನಗಳ ಮುಂಚೆ ಬಂದಿದ್ದಾರೆ. ಇದೊಂದು ನಾಟಕ” ಎಂದು ಅವರು ಆರೋಪಿಸಿದರು.

“ನಾನು ಬಿಇ ಮೆಕ್ಯಾನಿಕಲ್ ಪದವೀಧರ, ಕಳೆದ ಆರು ತಿಂಗಳಿಂದ ನನ್ನ ತಾಯಿ-ತಂದೆ ಯಾರನ್ನೂ ನೋಡಿಲ್ಲ. ನನ್ನ ಕುಟುಂಬದವರಿಂದ ದೂರವಾಗಿದ್ದೇನೆ. ಇದು ನನ್ನ ಜೀವನದ ಅತೀವ ಕಷ್ಟದ ಸಮಯ” ಎಂದು ತಮ್ಮ ಆಂತರಿಕ ದುಃಖವನ್ನು ಶೇರ್ ಮಾಡಿಕೊಂಡರು.

ಈ ನಡುವೆ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದಗಳು ಬಹಳ ಬಲವಾಗಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿತ್ತು. ಪರಿಣಾಮವಾಗಿ ನ್ಯಾಯಾಲಯವು ಯಾವುದೇ ರಿಯಾಯಿತಿ ನೀಡದೆ ಜೀವಾವಧಿ ಶಿಕ್ಷೆ ಘೋಷಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ದೊಡ್ಡ ಆತಂಕ ಮೂಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬದ ಸದಸ್ಯನಾದ ಪ್ರಜ್ವಲ್ ವಿರುದ್ಧ ಈ ತೀರ್ಪು ಜೆಡಿಎಸ್‌ಗೆ ಭಾರೀ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಬಹುದೆಂಬ ಅಂದಾಜು ವ್ಯಕ್ತವಾಗುತ್ತಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

3 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

3 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

14 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

14 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

14 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

14 hours ago