Latest

ಆರು ತಿಂಗಳಿಂದ ತಾಯಿ-ತಂದೆ ಭೇಟಿಯಾಗಿಲ್ಲ- ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಅತ್ಯಾಚಾರ ಮತ್ತು ಮಹಿಳೆಯ ಗೌಪ್ಯತೆ ಉಲ್ಲಂಘನೆಯ ಗಂಭೀರ ಪ್ರಕರಣದಲ್ಲಿ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ದೇಶಾದ್ಯಂತ ಕೇವಲ ರಾಜಕೀಯ ವಲಯದಲ್ಲಿ ಅಲ್ಲ, ಇಡೀ ಸಮಾಜದಲ್ಲೇ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದ ವಿಚಾರಣೆ ಬಳಿಕ, ಕಾನೂನು ತನ್ನ ಕರಾಳ ರೂಪ ತೋರಿಸಿದೆ.

ತೀರ್ಪು ಪ್ರಕಟವಾದ ಬಳಿಕ ಕೋರ್ಟ್ ಹಾಜರಾದ ಪ್ರಜ್ವಲ್ ರೇವಣ್ಣ, ಕಣ್ಣೀರು ಹಾಕುತ್ತಾ ದಯೆಯ ಮಂಡಿಸಿದರು. “ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಏಕೈಕ ತಪ್ಪೆಂದರೆ ರಾಜಕೀಯದಲ್ಲಿ ವೇಗವಾಗಿ ಬೆಳೆಯುವುದು” ಎಂದು ನ್ಯಾಯಮೂರ್ತಿಯ ಎದುರು ಭಾವನಾತ್ಮಕವಾಗಿ ಮಾತನಾಡಿದ ಅವರು, “ದಯವಿಟ್ಟು ನನಗೆ ಕಡಿಮೆ ಶಿಕ್ಷೆ ವಿಧಿಸಿ” ಎಂದು ಬೇಡಿಕೆ ಇಟ್ಟರು.

ಪ್ರಜ್ವಲ್ ರೇವಣ್ಣ ತಮ್ಮ ನ್ಯಾಯಾಲಯದ ಹೇಳಿಕೆಯಲ್ಲಿ, ತಮ್ಮ ಮೇಲೆ ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸತ್ತಿಲ್ಲದ ಸಹಿತ ಮಹಿಳೆಯರು ದೂರು ನೀಡಿರುವುದು ಸಂಶಯಾಸ್ಪದವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. “ಅನೇಕ ಮಹಿಳೆಯರು ದೂರು ನೀಡಿದರು ಎನ್ನುತ್ತಾರೆ. ಆದರೆ ಯಾರೂ ಸ್ವಯಂಪ್ರೇರಣೆಯಿಂದ ದೂರು ನೀಡಿಲ್ಲ. ಎಲ್ಲರೂ ಚುನಾವಣೆಗೆ ಆರು ದಿನಗಳ ಮುಂಚೆ ಬಂದಿದ್ದಾರೆ. ಇದೊಂದು ನಾಟಕ” ಎಂದು ಅವರು ಆರೋಪಿಸಿದರು.

“ನಾನು ಬಿಇ ಮೆಕ್ಯಾನಿಕಲ್ ಪದವೀಧರ, ಕಳೆದ ಆರು ತಿಂಗಳಿಂದ ನನ್ನ ತಾಯಿ-ತಂದೆ ಯಾರನ್ನೂ ನೋಡಿಲ್ಲ. ನನ್ನ ಕುಟುಂಬದವರಿಂದ ದೂರವಾಗಿದ್ದೇನೆ. ಇದು ನನ್ನ ಜೀವನದ ಅತೀವ ಕಷ್ಟದ ಸಮಯ” ಎಂದು ತಮ್ಮ ಆಂತರಿಕ ದುಃಖವನ್ನು ಶೇರ್ ಮಾಡಿಕೊಂಡರು.

ಈ ನಡುವೆ, ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದಗಳು ಬಹಳ ಬಲವಾಗಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿತ್ತು. ಪರಿಣಾಮವಾಗಿ ನ್ಯಾಯಾಲಯವು ಯಾವುದೇ ರಿಯಾಯಿತಿ ನೀಡದೆ ಜೀವಾವಧಿ ಶಿಕ್ಷೆ ಘೋಷಿಸಿದೆ.

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ದೊಡ್ಡ ಆತಂಕ ಮೂಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬದ ಸದಸ್ಯನಾದ ಪ್ರಜ್ವಲ್ ವಿರುದ್ಧ ಈ ತೀರ್ಪು ಜೆಡಿಎಸ್‌ಗೆ ಭಾರೀ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಬಹುದೆಂಬ ಅಂದಾಜು ವ್ಯಕ್ತವಾಗುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago