Latest

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ಜನಪ್ರತಿನಿಧಿಗಳ ಕೋರ್ಟ್ ತೀರ್ಪು

ಬೆಂಗಳೂರು, ಆಗಸ್ಟ್ 1 – ಮನೆಗೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಯುವ ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬ ತೀರ್ಪು ನೀಡುವ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ನಿರ್ಧಾರ ಪ್ರಕಟಿಸಿದೆ.

ನ್ಯಾಯಾಧೀಶ ನ್ಯಾ. ಸಂತೋಷ್ ಗಜನಾನನ ಭಟ್ ಅವರು ತೀರ್ಪು ವಾಚಿಸಿ, ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ವಿರುದ್ಧದ ಆರೋಪ ಸಾಬೀತಾದಂತಾಗಿದೆ ಎಂದು ಘೋಷಿಸಿದರು. ಇಂದು (ಆಗಸ್ಟ್ 1) ಬೆಳಿಗ್ಗೆ ತೀರ್ಪು ಪ್ರಕಟವಾಗಿದ್ದು, ತೀರ್ಪಿಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದ್ದರಿಂದ ಪ್ರಜ್ವಲ್ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ತೀರ್ಪು ಪ್ರಕಟಗೊಂಡ ತಕ್ಷಣ ಪ್ರಜ್ವಲ್ ಭಾವುಕತೆಗೆ ಜಾರಿದ್ದು, ಕೋರ್ಟ್ ಕೊಠಡಿಯಲ್ಲಿ ಕಣ್ಣೀರಿಟ್ಟರು. ನಂತರ ಪೊಲೀಸರು ಅವರನ್ನು ಕೋರ್ಟ್‌ನಿಂದ ಹಿಡಿದು ಜೈಲಿಗೆ ಕರೆದುಕೊಂಡು ಹೋದರು.

ಈ ತೀರ್ಪು ಸಂಬಂಧಿಸಿದಂತೆ ಒಂದು ಪ್ರಕರಣಕ್ಕೆ ಮಾತ್ರ ಆಗಿದ್ದು, ಪ್ರಜ್ವಲ್ ವಿರುದ್ಧ ಇನ್ನೂ ಮೂರು ಅತ್ಯಾಚಾರ ಸಂಬಂಧಿತ ಪ್ರಕರಣಗಳು ಮುಂದುವರಿದಿವೆ.

ಈ ಹಿಂದೆಯೇ ಜುಲೈ 28ರಂದು ವಾದವಿವಾದ ನಡೆಯಿದ್ದು, ತೀರ್ಪನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ನಿರ್ಧರಿಸಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ತೀರ್ಪು ಪ್ರಕಟಣೆ ದಿನಾಂಕ ಇಂದಿಗೆ (ಆಗಸ್ಟ್ 1) ಮುಂದೂಡಲಾಗಿತ್ತು.

ಪ್ರಜ್ವಲ್ ರೇವಣ್ಣ ವಿರುದ್ಧದ ಈ ತೀರ್ಪು ಜೆಡಿಎಸ್ ಪಕ್ಷಕ್ಕೂ ರಾಜಕೀಯವಾಗಿ ದೊಡ್ಡ ಬಡಿತ ನೀಡುವ ಸಾಧ್ಯತೆ ಇದೆ. ಮುಂದಿನ ಹಂತದಲ್ಲಿ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವ ವಿಚಾರಣೆ ಶೀಘ್ರವೇ ನಡೆಯಲಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago