Latest

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ಜನಪ್ರತಿನಿಧಿಗಳ ಕೋರ್ಟ್ ತೀರ್ಪು

ಬೆಂಗಳೂರು, ಆಗಸ್ಟ್ 1 – ಮನೆಗೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಯುವ ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬ ತೀರ್ಪು ನೀಡುವ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ನಿರ್ಧಾರ ಪ್ರಕಟಿಸಿದೆ.

ನ್ಯಾಯಾಧೀಶ ನ್ಯಾ. ಸಂತೋಷ್ ಗಜನಾನನ ಭಟ್ ಅವರು ತೀರ್ಪು ವಾಚಿಸಿ, ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ವಿರುದ್ಧದ ಆರೋಪ ಸಾಬೀತಾದಂತಾಗಿದೆ ಎಂದು ಘೋಷಿಸಿದರು. ಇಂದು (ಆಗಸ್ಟ್ 1) ಬೆಳಿಗ್ಗೆ ತೀರ್ಪು ಪ್ರಕಟವಾಗಿದ್ದು, ತೀರ್ಪಿಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದ್ದರಿಂದ ಪ್ರಜ್ವಲ್ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ತೀರ್ಪು ಪ್ರಕಟಗೊಂಡ ತಕ್ಷಣ ಪ್ರಜ್ವಲ್ ಭಾವುಕತೆಗೆ ಜಾರಿದ್ದು, ಕೋರ್ಟ್ ಕೊಠಡಿಯಲ್ಲಿ ಕಣ್ಣೀರಿಟ್ಟರು. ನಂತರ ಪೊಲೀಸರು ಅವರನ್ನು ಕೋರ್ಟ್‌ನಿಂದ ಹಿಡಿದು ಜೈಲಿಗೆ ಕರೆದುಕೊಂಡು ಹೋದರು.

ಈ ತೀರ್ಪು ಸಂಬಂಧಿಸಿದಂತೆ ಒಂದು ಪ್ರಕರಣಕ್ಕೆ ಮಾತ್ರ ಆಗಿದ್ದು, ಪ್ರಜ್ವಲ್ ವಿರುದ್ಧ ಇನ್ನೂ ಮೂರು ಅತ್ಯಾಚಾರ ಸಂಬಂಧಿತ ಪ್ರಕರಣಗಳು ಮುಂದುವರಿದಿವೆ.

ಈ ಹಿಂದೆಯೇ ಜುಲೈ 28ರಂದು ವಾದವಿವಾದ ನಡೆಯಿದ್ದು, ತೀರ್ಪನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ನಿರ್ಧರಿಸಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ತೀರ್ಪು ಪ್ರಕಟಣೆ ದಿನಾಂಕ ಇಂದಿಗೆ (ಆಗಸ್ಟ್ 1) ಮುಂದೂಡಲಾಗಿತ್ತು.

ಪ್ರಜ್ವಲ್ ರೇವಣ್ಣ ವಿರುದ್ಧದ ಈ ತೀರ್ಪು ಜೆಡಿಎಸ್ ಪಕ್ಷಕ್ಕೂ ರಾಜಕೀಯವಾಗಿ ದೊಡ್ಡ ಬಡಿತ ನೀಡುವ ಸಾಧ್ಯತೆ ಇದೆ. ಮುಂದಿನ ಹಂತದಲ್ಲಿ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವ ವಿಚಾರಣೆ ಶೀಘ್ರವೇ ನಡೆಯಲಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

13 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

13 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago