ಬೆಂಗಳೂರು, ಆಗಸ್ಟ್ 1 – ಮನೆಗೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಯುವ ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬ ತೀರ್ಪು ನೀಡುವ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ನಿರ್ಧಾರ ಪ್ರಕಟಿಸಿದೆ.
ನ್ಯಾಯಾಧೀಶ ನ್ಯಾ. ಸಂತೋಷ್ ಗಜನಾನನ ಭಟ್ ಅವರು ತೀರ್ಪು ವಾಚಿಸಿ, ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ವಿರುದ್ಧದ ಆರೋಪ ಸಾಬೀತಾದಂತಾಗಿದೆ ಎಂದು ಘೋಷಿಸಿದರು. ಇಂದು (ಆಗಸ್ಟ್ 1) ಬೆಳಿಗ್ಗೆ ತೀರ್ಪು ಪ್ರಕಟವಾಗಿದ್ದು, ತೀರ್ಪಿಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿದ್ದರಿಂದ ಪ್ರಜ್ವಲ್ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ತೀರ್ಪು ಪ್ರಕಟಗೊಂಡ ತಕ್ಷಣ ಪ್ರಜ್ವಲ್ ಭಾವುಕತೆಗೆ ಜಾರಿದ್ದು, ಕೋರ್ಟ್ ಕೊಠಡಿಯಲ್ಲಿ ಕಣ್ಣೀರಿಟ್ಟರು. ನಂತರ ಪೊಲೀಸರು ಅವರನ್ನು ಕೋರ್ಟ್ನಿಂದ ಹಿಡಿದು ಜೈಲಿಗೆ ಕರೆದುಕೊಂಡು ಹೋದರು.
ಈ ತೀರ್ಪು ಸಂಬಂಧಿಸಿದಂತೆ ಒಂದು ಪ್ರಕರಣಕ್ಕೆ ಮಾತ್ರ ಆಗಿದ್ದು, ಪ್ರಜ್ವಲ್ ವಿರುದ್ಧ ಇನ್ನೂ ಮೂರು ಅತ್ಯಾಚಾರ ಸಂಬಂಧಿತ ಪ್ರಕರಣಗಳು ಮುಂದುವರಿದಿವೆ.
ಈ ಹಿಂದೆಯೇ ಜುಲೈ 28ರಂದು ವಾದವಿವಾದ ನಡೆಯಿದ್ದು, ತೀರ್ಪನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ನಿರ್ಧರಿಸಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ತೀರ್ಪು ಪ್ರಕಟಣೆ ದಿನಾಂಕ ಇಂದಿಗೆ (ಆಗಸ್ಟ್ 1) ಮುಂದೂಡಲಾಗಿತ್ತು.
ಪ್ರಜ್ವಲ್ ರೇವಣ್ಣ ವಿರುದ್ಧದ ಈ ತೀರ್ಪು ಜೆಡಿಎಸ್ ಪಕ್ಷಕ್ಕೂ ರಾಜಕೀಯವಾಗಿ ದೊಡ್ಡ ಬಡಿತ ನೀಡುವ ಸಾಧ್ಯತೆ ಇದೆ. ಮುಂದಿನ ಹಂತದಲ್ಲಿ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವ ವಿಚಾರಣೆ ಶೀಘ್ರವೇ ನಡೆಯಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…