ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರದ ಬಳಿ ಮನನೊಂದಿಸುವ ಘಟನೆ ನಡೆದಿದೆ. ಗರ್ಭಿಣಿ ಗೋವಿನ ಹತ್ಯೆಗೈದು, ಅದರ ಮಾಂಸವನ್ನು ಕಳ್ಳಸಾಗಣೆ ಮಾಡಿರುವ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯು ಬೆಳಕಿಗೆ ಬಂದ ತಂತ್ರ ಎಚ್ಚರಿಕೆಗೆ ಕಾರಣವಾಗಿದೆ. ಬೀದಿ ನಾಯಿಯೊಂದು ಒಂದು ಗೋಣಿ ಚೀಲವನ್ನು ಎಳೆಯುತ್ತಾ ಬರುತ್ತಿದ್ದ ದೃಶ್ಯ ಸ್ಥಳೀಯರ ಗಮನಸೆಳೆದಿದ್ದು, ಚೀಲವನ್ನು ತೆರೆದು ನೋಡಿದಾಗ ಆಂತರಿಕ ಅಂಗಾಂಗಗಳೊಂದಿಗೆ ಗೋವು ಗರ್ಭದಲ್ಲಿದ್ದ ಕರುವಿನ ಭ್ರೂಣವನ್ನೂ ಕಾಣಲಾಗಿದೆ.
ಈ ಅಮಾನವೀಯ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಮಾಂಸಕ್ಕಾಗಿ ಇಂತಹ ಕ್ರೂರ ವರ್ತನೆ ಕೇವಲ ನಾಚಿಕೆಯ ವಿಷಯವೇ ಅಲ್ಲ, ಕಾನೂನುಬಾಹಿರವೂ ಆಗಿದೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದೇ ರೀತಿಯ ಘಟನೆ ಈಗೀಗ ಹೊನ್ನಾವರದಲ್ಲೂ ನಡೆದಿತ್ತು. ಆ ಪ್ರಕರಣದ ನಡುಕು ಇನ್ನೂ ಕಡಿಮೆಯಾಗಿಲ್ಲವೋ ಎನ್ನುವಾಗಲೇ, ಇದೀಗ ಭಟ್ಕಳದಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ದಾಖಲಾಗಿದೆ.
ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಮುಂದುವರೆದಿದೆ. ಸಾರ್ವಜನಿಕರು ಕ್ರೂರವಾಗಿ ಹತ್ಯೆಗೈದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…