ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರದ ಬಳಿ ಮನನೊಂದಿಸುವ ಘಟನೆ ನಡೆದಿದೆ. ಗರ್ಭಿಣಿ ಗೋವಿನ ಹತ್ಯೆಗೈದು, ಅದರ ಮಾಂಸವನ್ನು ಕಳ್ಳಸಾಗಣೆ ಮಾಡಿರುವ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯು ಬೆಳಕಿಗೆ ಬಂದ ತಂತ್ರ ಎಚ್ಚರಿಕೆಗೆ ಕಾರಣವಾಗಿದೆ. ಬೀದಿ ನಾಯಿಯೊಂದು ಒಂದು ಗೋಣಿ ಚೀಲವನ್ನು ಎಳೆಯುತ್ತಾ ಬರುತ್ತಿದ್ದ ದೃಶ್ಯ ಸ್ಥಳೀಯರ ಗಮನಸೆಳೆದಿದ್ದು, ಚೀಲವನ್ನು ತೆರೆದು ನೋಡಿದಾಗ ಆಂತರಿಕ ಅಂಗಾಂಗಗಳೊಂದಿಗೆ ಗೋವು ಗರ್ಭದಲ್ಲಿದ್ದ ಕರುವಿನ ಭ್ರೂಣವನ್ನೂ ಕಾಣಲಾಗಿದೆ.
ಈ ಅಮಾನವೀಯ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಮಾಂಸಕ್ಕಾಗಿ ಇಂತಹ ಕ್ರೂರ ವರ್ತನೆ ಕೇವಲ ನಾಚಿಕೆಯ ವಿಷಯವೇ ಅಲ್ಲ, ಕಾನೂನುಬಾಹಿರವೂ ಆಗಿದೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದೇ ರೀತಿಯ ಘಟನೆ ಈಗೀಗ ಹೊನ್ನಾವರದಲ್ಲೂ ನಡೆದಿತ್ತು. ಆ ಪ್ರಕರಣದ ನಡುಕು ಇನ್ನೂ ಕಡಿಮೆಯಾಗಿಲ್ಲವೋ ಎನ್ನುವಾಗಲೇ, ಇದೀಗ ಭಟ್ಕಳದಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ದಾಖಲಾಗಿದೆ.
ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಮುಂದುವರೆದಿದೆ. ಸಾರ್ವಜನಿಕರು ಕ್ರೂರವಾಗಿ ಹತ್ಯೆಗೈದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…