Latest

ಗರ್ಭಿಣಿ ಗೋವಿನ ಹತ್ಯೆ: ಭ್ರೂಣವನ್ನು ಚೀಲದಲ್ಲಿ ಕಟ್ಟಿ ಬೀದಿಗೆ ಎಸೆದ ದುಷ್ಕರ್ಮಿಗಳು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರದ ಬಳಿ ಮನನೊಂದಿಸುವ ಘಟನೆ ನಡೆದಿದೆ. ಗರ್ಭಿಣಿ ಗೋವಿನ ಹತ್ಯೆಗೈದು, ಅದರ ಮಾಂಸವನ್ನು ಕಳ್ಳಸಾಗಣೆ ಮಾಡಿರುವ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯು ಬೆಳಕಿಗೆ ಬಂದ ತಂತ್ರ ಎಚ್ಚರಿಕೆಗೆ ಕಾರಣವಾಗಿದೆ. ಬೀದಿ ನಾಯಿಯೊಂದು ಒಂದು ಗೋಣಿ ಚೀಲವನ್ನು ಎಳೆಯುತ್ತಾ ಬರುತ್ತಿದ್ದ ದೃಶ್ಯ ಸ್ಥಳೀಯರ ಗಮನಸೆಳೆದಿದ್ದು, ಚೀಲವನ್ನು ತೆರೆದು ನೋಡಿದಾಗ ಆಂತರಿಕ ಅಂಗಾಂಗಗಳೊಂದಿಗೆ ಗೋವು ಗರ್ಭದಲ್ಲಿದ್ದ ಕರುವಿನ ಭ್ರೂಣವನ್ನೂ ಕಾಣಲಾಗಿದೆ.

ಈ ಅಮಾನವೀಯ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಮಾಂಸಕ್ಕಾಗಿ ಇಂತಹ ಕ್ರೂರ ವರ್ತನೆ ಕೇವಲ ನಾಚಿಕೆಯ ವಿಷಯವೇ ಅಲ್ಲ, ಕಾನೂನುಬಾಹಿರವೂ ಆಗಿದೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದೇ ರೀತಿಯ ಘಟನೆ ಈಗೀಗ ಹೊನ್ನಾವರದಲ್ಲೂ ನಡೆದಿತ್ತು. ಆ ಪ್ರಕರಣದ ನಡುಕು ಇನ್ನೂ ಕಡಿಮೆಯಾಗಿಲ್ಲವೋ ಎನ್ನುವಾಗಲೇ, ಇದೀಗ ಭಟ್ಕಳದಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ದಾಖಲಾಗಿದೆ.

ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಮುಂದುವರೆದಿದೆ. ಸಾರ್ವಜನಿಕರು ಕ್ರೂರವಾಗಿ ಹತ್ಯೆಗೈದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago