ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕುಕನೀರ್ ವೆಂಕಟಾಪುರದ ಬಳಿ ಮನನೊಂದಿಸುವ ಘಟನೆ ನಡೆದಿದೆ. ಗರ್ಭಿಣಿ ಗೋವಿನ ಹತ್ಯೆಗೈದು, ಅದರ ಮಾಂಸವನ್ನು ಕಳ್ಳಸಾಗಣೆ ಮಾಡಿರುವ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯು ಬೆಳಕಿಗೆ ಬಂದ ತಂತ್ರ ಎಚ್ಚರಿಕೆಗೆ ಕಾರಣವಾಗಿದೆ. ಬೀದಿ ನಾಯಿಯೊಂದು ಒಂದು ಗೋಣಿ ಚೀಲವನ್ನು ಎಳೆಯುತ್ತಾ ಬರುತ್ತಿದ್ದ ದೃಶ್ಯ ಸ್ಥಳೀಯರ ಗಮನಸೆಳೆದಿದ್ದು, ಚೀಲವನ್ನು ತೆರೆದು ನೋಡಿದಾಗ ಆಂತರಿಕ ಅಂಗಾಂಗಗಳೊಂದಿಗೆ ಗೋವು ಗರ್ಭದಲ್ಲಿದ್ದ ಕರುವಿನ ಭ್ರೂಣವನ್ನೂ ಕಾಣಲಾಗಿದೆ.
ಈ ಅಮಾನವೀಯ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದು, ಮಾಂಸಕ್ಕಾಗಿ ಇಂತಹ ಕ್ರೂರ ವರ್ತನೆ ಕೇವಲ ನಾಚಿಕೆಯ ವಿಷಯವೇ ಅಲ್ಲ, ಕಾನೂನುಬಾಹಿರವೂ ಆಗಿದೆ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದೇ ರೀತಿಯ ಘಟನೆ ಈಗೀಗ ಹೊನ್ನಾವರದಲ್ಲೂ ನಡೆದಿತ್ತು. ಆ ಪ್ರಕರಣದ ನಡುಕು ಇನ್ನೂ ಕಡಿಮೆಯಾಗಿಲ್ಲವೋ ಎನ್ನುವಾಗಲೇ, ಇದೀಗ ಭಟ್ಕಳದಲ್ಲಿ ಮತ್ತೊಂದು ಆಘಾತಕಾರಿ ಪ್ರಕರಣ ದಾಖಲಾಗಿದೆ.
ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಮುಂದುವರೆದಿದೆ. ಸಾರ್ವಜನಿಕರು ಕ್ರೂರವಾಗಿ ಹತ್ಯೆಗೈದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…