ಭಟ್ಕಳ, ಏಪ್ರಿಲ್ 21 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ವೆಂಕಟಾಪುರ ನದಿಯ ದಂಡೆಯಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸದಾಗಿ ಬಳಸಿ, ಆ ಹಸುವಿನ ಹೊಟ್ಟೆಯಲ್ಲಿ ಇರುವ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಅಮಾನವೀಯ ಘಟನೆಯು ಶನಿವಾರ ಬೆಳಕಿಗೆ ಬಂದಿದೆ. ಈ ಘಟನೆಯ ಪ್ರಮುಖ ಆರೋಪಿ ಹನೀಫಾಬಾದ್ ನಿವಾಸಿ ಮೋಹಮ್ಮದ್ ಇಬ್ರಾಹಿಂ ಹವ್ವಾ ಎಂಬಾತನನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ನದಿಯ ದಡದಲ್ಲಿ ಬೀದಿ ನಾಯಿಯೊಂದು ಚೀಲವನ್ನು ಎಳೆದು ತಿನ್ನುತ್ತಿದ್ದ ಸಂದರ್ಭದಲ್ಲಿ ಹಸುವಿನ ಕರು ಹೊರಬಂದು ಸ್ಥಳೀಯರ ಗಮನ ಸೆಳೆದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಸ್ಥಳೀಯರ ಆಕ್ರೋಶ ಮತ್ತು ಹಿಂದೂ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಭಟ್ಕಳ ಎಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮಹೇಶ್ ಕೆ ನೇತೃತ್ವದ ವಿಶೇಷ ತಂಡವನ್ನು ಎಸ್ಪಿ ಎಂ. ನಾರಾಯಣ ರಚಿಸಿದ್ದರು.
ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಈ ಘಟನೆಯು ಜನರಲ್ಲಿ ಆಕ್ರೋಶ ಉಂಟುಮಾಡಿದ್ದು, ತಕ್ಷಣ ಬಂಧನೆಗೆ ಒತ್ತಾಯ ವ್ಯಕ್ತವಾಗಿತ್ತು. ಪೊಲೀಸರು ಕೇವಲ ಎರಡು ದಿನಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವುದು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ.
ಈ ಹಿಂದೆ, ಜನವರಿ ತಿಂಗಳಲ್ಲಿ ಹೊನ್ನಾವರದಲ್ಲಿ ನಡೆದಿದ್ದ ಇದೇ ರೀತಿಯ ಘಟನೆಯು ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಅಲ್ಲಿ ಗರ್ಭಿಣಿ ಹಸುವನ್ನು ದುಷ್ಕರ್ಮಿಗಳು ಕೊಂದು ಮದುವೆ ಸಮಾರಂಭದ ಊಟಕ್ಕೆ ಮಾಂಸ ಕಳುಹಿಸುವ ಯತ್ನ ನಡೆಸಿದ್ದರು. ಆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದ ಪೋಲೀಸರು, ಇದೀಗ ಭಟ್ಕಳ ಪ್ರಕರಣದಲ್ಲಿಯೂ ಶೀಘ್ರ ಕಾರ್ಯಾಚರಣೆ ಮೂಲಕ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ.
ಸ್ಥಳೀಯರು ಹಾಗೂ ಸಂಘಟನೆಗಳು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದು, ಗೋವಧೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ವರದಿ: ಕುಮಾರ್ ನಾಯಕ್
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…