Categories: Latest

ಗರ್ಭಿಣಿ ಹಸು ಹತ್ಯೆ ಪ್ರಕರಣ: ಭ್ರೂಣವನ್ನು ಚೀಲದಲ್ಲಿ ಕಟ್ಟಿ ನದಿ ದಂಡೆಗೆ ಎಸೆದ ಮೊಹಮ್ಮದ್ ಇಬ್ರಾಹಿಂ ಅರೆಸ್ಟ್.

ಭಟ್ಕಳ, ಏಪ್ರಿಲ್ 21 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ವೆಂಕಟಾಪುರ ನದಿಯ ದಂಡೆಯಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸದಾಗಿ ಬಳಸಿ, ಆ ಹಸುವಿನ ಹೊಟ್ಟೆಯಲ್ಲಿ ಇರುವ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಅಮಾನವೀಯ ಘಟನೆಯು ಶನಿವಾರ ಬೆಳಕಿಗೆ ಬಂದಿದೆ. ಈ ಘಟನೆಯ ಪ್ರಮುಖ ಆರೋಪಿ ಹನೀಫಾಬಾದ್ ನಿವಾಸಿ ಮೋಹಮ್ಮದ್ ಇಬ್ರಾಹಿಂ ಹವ್ವಾ ಎಂಬಾತನನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ನದಿಯ ದಡದಲ್ಲಿ ಬೀದಿ ನಾಯಿಯೊಂದು ಚೀಲವನ್ನು ಎಳೆದು ತಿನ್ನುತ್ತಿದ್ದ ಸಂದರ್ಭದಲ್ಲಿ ಹಸುವಿನ ಕರು ಹೊರಬಂದು ಸ್ಥಳೀಯರ ಗಮನ ಸೆಳೆದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಸ್ಥಳೀಯರ ಆಕ್ರೋಶ ಮತ್ತು ಹಿಂದೂ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಭಟ್ಕಳ ಎಎಸ್‌ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮಹೇಶ್ ಕೆ ನೇತೃತ್ವದ ವಿಶೇಷ ತಂಡವನ್ನು ಎಸ್‌ಪಿ ಎಂ. ನಾರಾಯಣ ರಚಿಸಿದ್ದರು.

ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಈ ಘಟನೆಯು ಜನರಲ್ಲಿ ಆಕ್ರೋಶ ಉಂಟುಮಾಡಿದ್ದು, ತಕ್ಷಣ ಬಂಧನೆಗೆ ಒತ್ತಾಯ ವ್ಯಕ್ತವಾಗಿತ್ತು. ಪೊಲೀಸರು ಕೇವಲ ಎರಡು ದಿನಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವುದು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ.

ಈ ಹಿಂದೆ, ಜನವರಿ ತಿಂಗಳಲ್ಲಿ ಹೊನ್ನಾವರದಲ್ಲಿ ನಡೆದಿದ್ದ ಇದೇ ರೀತಿಯ ಘಟನೆಯು ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಅಲ್ಲಿ ಗರ್ಭಿಣಿ ಹಸುವನ್ನು ದುಷ್ಕರ್ಮಿಗಳು ಕೊಂದು ಮದುವೆ ಸಮಾರಂಭದ ಊಟಕ್ಕೆ ಮಾಂಸ ಕಳುಹಿಸುವ ಯತ್ನ ನಡೆಸಿದ್ದರು. ಆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದ ಪೋಲೀಸರು, ಇದೀಗ ಭಟ್ಕಳ ಪ್ರಕರಣದಲ್ಲಿಯೂ ಶೀಘ್ರ ಕಾರ್ಯಾಚರಣೆ ಮೂಲಕ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ.

ಸ್ಥಳೀಯರು ಹಾಗೂ ಸಂಘಟನೆಗಳು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದು, ಗೋವಧೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ವರದಿ: ಕುಮಾರ್ ನಾಯಕ್

nazeer ahamad

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

10 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

10 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

12 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

12 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

13 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

1 day ago