Categories: Latest

ಗರ್ಭಿಣಿ ಹಸು ಹತ್ಯೆ ಪ್ರಕರಣ: ಭ್ರೂಣವನ್ನು ಚೀಲದಲ್ಲಿ ಕಟ್ಟಿ ನದಿ ದಂಡೆಗೆ ಎಸೆದ ಮೊಹಮ್ಮದ್ ಇಬ್ರಾಹಿಂ ಅರೆಸ್ಟ್.

ಭಟ್ಕಳ, ಏಪ್ರಿಲ್ 21 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ವೆಂಕಟಾಪುರ ನದಿಯ ದಂಡೆಯಲ್ಲಿ ಗರ್ಭಿಣಿ ಹಸುವನ್ನು ಕಡಿದು ಮಾಂಸದಾಗಿ ಬಳಸಿ, ಆ ಹಸುವಿನ ಹೊಟ್ಟೆಯಲ್ಲಿ ಇರುವ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಅಮಾನವೀಯ ಘಟನೆಯು ಶನಿವಾರ ಬೆಳಕಿಗೆ ಬಂದಿದೆ. ಈ ಘಟನೆಯ ಪ್ರಮುಖ ಆರೋಪಿ ಹನೀಫಾಬಾದ್ ನಿವಾಸಿ ಮೋಹಮ್ಮದ್ ಇಬ್ರಾಹಿಂ ಹವ್ವಾ ಎಂಬಾತನನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ನದಿಯ ದಡದಲ್ಲಿ ಬೀದಿ ನಾಯಿಯೊಂದು ಚೀಲವನ್ನು ಎಳೆದು ತಿನ್ನುತ್ತಿದ್ದ ಸಂದರ್ಭದಲ್ಲಿ ಹಸುವಿನ ಕರು ಹೊರಬಂದು ಸ್ಥಳೀಯರ ಗಮನ ಸೆಳೆದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಸ್ಥಳೀಯರ ಆಕ್ರೋಶ ಮತ್ತು ಹಿಂದೂ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಭಟ್ಕಳ ಎಎಸ್‌ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮಹೇಶ್ ಕೆ ನೇತೃತ್ವದ ವಿಶೇಷ ತಂಡವನ್ನು ಎಸ್‌ಪಿ ಎಂ. ನಾರಾಯಣ ರಚಿಸಿದ್ದರು.

ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಈ ಘಟನೆಯು ಜನರಲ್ಲಿ ಆಕ್ರೋಶ ಉಂಟುಮಾಡಿದ್ದು, ತಕ್ಷಣ ಬಂಧನೆಗೆ ಒತ್ತಾಯ ವ್ಯಕ್ತವಾಗಿತ್ತು. ಪೊಲೀಸರು ಕೇವಲ ಎರಡು ದಿನಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವುದು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ.

ಈ ಹಿಂದೆ, ಜನವರಿ ತಿಂಗಳಲ್ಲಿ ಹೊನ್ನಾವರದಲ್ಲಿ ನಡೆದಿದ್ದ ಇದೇ ರೀತಿಯ ಘಟನೆಯು ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಅಲ್ಲಿ ಗರ್ಭಿಣಿ ಹಸುವನ್ನು ದುಷ್ಕರ್ಮಿಗಳು ಕೊಂದು ಮದುವೆ ಸಮಾರಂಭದ ಊಟಕ್ಕೆ ಮಾಂಸ ಕಳುಹಿಸುವ ಯತ್ನ ನಡೆಸಿದ್ದರು. ಆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದ ಪೋಲೀಸರು, ಇದೀಗ ಭಟ್ಕಳ ಪ್ರಕರಣದಲ್ಲಿಯೂ ಶೀಘ್ರ ಕಾರ್ಯಾಚರಣೆ ಮೂಲಕ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ.

ಸ್ಥಳೀಯರು ಹಾಗೂ ಸಂಘಟನೆಗಳು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದು, ಗೋವಧೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ವರದಿ: ಕುಮಾರ್ ನಾಯಕ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago