ಮೈಸೂರು ನಗರದ ಕೆ.ಆರ್.ಆಸ್ವತ್ರೆಯ ಸ್ಕಾನಿಂಗ್ ರೂಂ ನಲ್ಲಿ ಸ್ಕಾನಿಂಗ್ ಮಾಡಲು ಅಳವಡಿಸಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಕಳ್ಳತನವಾಗಿದ್ದು ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ದಿನಾಂಕ: ೧೩/೦೯/೨೦೨೨ ರಂದು ಪ್ರಕರಣ ದಾಖಲಾಗಿದ್ದು, ಸದರಿ ಪ್ರಕರಣದಲ್ಲಿ ದೇವರಾಜ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಆರೋಪಿಯನ್ನು ದಿನಾಂಕ: ೧೬/೦೯/೨೦೨೨ ರಂದು ದಸ್ತಗಿರಿ ಮಾಡಿ ಆತನಿಂದ ಕಳುವಾಗಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ದೇವರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಶಿಧರ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…