Latest

ಸಾಲದ ಬಾಕಿ ಪಾವತಿಸಲು ಒತ್ತಡ: ಫೈನಾನ್ಸ್ ಉದ್ಯೋಗಿ ಬಂಧನ

ಮೈಸೂರು: ಸಾಲದ ಬಾಕಿ ಪಾವತಿಸಲು ಒತ್ತಡ ಹೇರುತ್ತಿದ್ದ ಎವಿಐಒಎಂ ಫೈನಾನ್ಸ್‌ನ ಉದ್ಯೋಗಿ ಹನುಮಂತರಾಯಪ್ಪ ಅವರನ್ನು ಕೋರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಗೌರಗೊಂಡನಹಳ್ಳಿಯ ವರಲಕ್ಷ್ಮಮ್ಮ ಎಂಬುವವರು ಫೈನಾನ್ಸ್‌ನಿಂದ ₹2.63 ಲಕ್ಷ ಸಾಲ ಪಡೆದಿದ್ದರು. ಆದರೆ, ನಾಲ್ಕು ತಿಂಗಳ ಕಾಲ ಕಂತು ಪಾವತಿಸಿಲ್ಲ ಎಂಬ ಕಾರಣಕ್ಕೆ ಹನುಮಂತರಾಯಪ್ಪ ಅವರು ಭಾರೀ ಒತ್ತಡ ಹೇರುತ್ತಿದ್ದರು.

ಬೆದರಿಕೆ, ಅವಮಾನ ಆರೋಪ

“ಒಂದು ವಾರದಲ್ಲಿ ಬಡ್ಡಿ ಮತ್ತು ಅಸಲು ಪಾವತಿಸದಿದ್ದರೆ ಮನೆಗೆ ಬೀಗ ಹಾಕಲಾಗುವುದು, ಹರಾಜು ಮಾಡಲಾಗುವುದು” ಎಂದು ಅವರು ಬೆದರಿಕೆ ಹಾಕಿದ್ದಾರೆ ಎಂಬ ದೂರನ್ನು ವರಲಕ್ಷ್ಮಮ್ಮ ಅವರ ಪುತ್ರ ಪ್ರವೀಣ್ ಪೊಲೀಸ್ ಠಾಣೆಗೆ ಸಲ್ಲಿಸಿದ್ದರು.

ಹನುಮಂತರಾಯಪ್ಪ ಮಾತ್ರವಲ್ಲ, ಫೈನಾನ್ಸ್ ಕಂಪನಿಯ ಕೆಲವರು ಮನೆ ಗೋಡೆ ಮೇಲೆ “ಈ ಸ್ವತ್ತು ಎವಿಐಒಎಂ ಅಧೀನದಲ್ಲಿರುತ್ತದೆ” ಎಂದು ಬರೆಸಿದ್ದರೆಂದು ದೂರು ನೀಡಲಾಗಿದೆ. ಈ ಮೂಲಕ ಕುಟುಂಬಕ್ಕೆ ಅವಮಾನ ಮಾಡಲಾಗಿದೆ ಎಂದು ಪ್ರವೀಣ್ ದೂರಿದ್ದಾರೆ.

ಗ್ರಾಮಸ್ಥರ ತಡೆ, ಪೊಲೀಸರು ಕ್ರಮ

ಹನುಮಂತರಾಯಪ್ಪ ಮತ್ತೊಮ್ಮೆ ಮನೆಗೆ ಬಂದು ಬೀಗ ಹಾಕಲು ಯತ್ನಿಸಿದಾಗ, ಗ್ರಾಮಸ್ಥರು ಇದನ್ನು ತಡೆದಿದ್ದಾರೆ. ಕಂತು ಪಾವತಿಸಿದ್ದರೂ ಹಿನ್ನೆಲೆ ಹಣ ₹3 ಲಕ್ಷ ಕಟ್ಟಬೇಕು ಎಂದು ಮನೆಯ ಗೋಡೆ ಮೇಲೆ ಬರೆದು ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಕೋರ ಠಾಣೆಯ ಪೊಲೀಸರು ಹನುಮಂತರಾಯಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮುಂದಿನ ಹಂತದಲ್ಲಿ ಫೈನಾನ್ಸ್ ಸಂಸ್ಥೆಯ ಇತರರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago