ಭಾರತದ ನಿಜವಾದ ಶಕ್ತಿ ಮತ್ತು ಆತ್ಮವನ್ನು ಥಡೆಯುವ ಭಯೋತ್ಪಾದಕರ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಂಭವಿಸಿದ ಭೀಕರ ದಾಳಿಯ ವಿರುದ್ಧ ಕಿಡಿಕಾರಿದರು.
“ಇದು ಪ್ರವಾಸಿಗರ ವಿರುದ್ಧ ನಡೆದ ದಾಳಿ ಅಲ್ಲ, ಇದು ಭಾರತ ದೇಶದ ಆತ್ಮದ ಮೇಲೆ ಮಾಡಲಾದ ಕ್ರೂರ ಹಲ್ಲೆ,” ಎಂದು ಪ್ರಧಾನಿಯವರು ಎಚ್ಚರಿಕೆಯ ಸಂದೇಶವೊಂದನ್ನು ಭಯೋತ್ಪಾದಕರಿಗೆ ಕಳಿಸಿದರು. “ಅಮಾಯಕ ಜನರನ್ನು ನಿರ್ದಯವಾಗಿ ಕೊಂದು ಭಯಹುಟ್ಟಿಸಿರುವ ಉಗ್ರರು ತಪ್ಪಿಸಿಕೊಳ್ಳಲಾರರು. ಅವರನ್ನು ಹುಡುಕಿ ಹುಡುಕಿ ಹೊಡೆಯುವುದು ನಮ್ಮ ಸಂಕಲ್ಪ. ದೇಶದ ಶತ್ರುಗಳಿಗೆ ತಕ್ಕ ಪಾಠ ಕಲಿಸಿಯೇ ತೀರುತ್ತೇವೆ,” ಎಂದು ಅವರು ಉಗ್ರರ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು.
ದೇಶದ ಎಲ್ಲಾ ನಾಗರಿಕರಿಗೆ ಗೌರವ ನೀಡುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಮೋದಿ ಪುನರುಚ್ಛರಿಸಿದರು. “ಕನ್ನಡಿಗರು ಸೇರಿದಂತೆ ಭಾರತದ ವಿವಿಧೆಡೆಯಿಂದ ಬಂದಿರುವ ಅಮಾಯಕರನ್ನು ಈ ಭಯೋತ್ಪಾದಕರು ಗುರಿಯಾಗಿಸಿದ್ದಾರೆ. ಇದು ಸಹಿಸಿಕೊಳ್ಳಲಾಗದು,” ಎಂದ ಅವರು, ಭದ್ರತಾ ಪಡೆಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ ಎಂಬ ಭರವಸೆಯನ್ನು ಜನತೆಗೆ ನೀಡಿದರು.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…