Latest

ಪ್ರಧಾನಿ ಮೋದಿ ಕಿಡಿ: ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸುತ್ತೇವೆ

ಭಾರತದ ನಿಜವಾದ ಶಕ್ತಿ ಮತ್ತು ಆತ್ಮವನ್ನು ಥಡೆಯುವ ಭಯೋತ್ಪಾದಕರ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸಂಭವಿಸಿದ ಭೀಕರ ದಾಳಿಯ ವಿರುದ್ಧ ಕಿಡಿಕಾರಿದರು.

“ಇದು ಪ್ರವಾಸಿಗರ ವಿರುದ್ಧ ನಡೆದ ದಾಳಿ ಅಲ್ಲ, ಇದು ಭಾರತ ದೇಶದ ಆತ್ಮದ ಮೇಲೆ ಮಾಡಲಾದ ಕ್ರೂರ ಹಲ್ಲೆ,” ಎಂದು ಪ್ರಧಾನಿಯವರು ಎಚ್ಚರಿಕೆಯ ಸಂದೇಶವೊಂದನ್ನು ಭಯೋತ್ಪಾದಕರಿಗೆ ಕಳಿಸಿದರು. “ಅಮಾಯಕ ಜನರನ್ನು ನಿರ್ದಯವಾಗಿ ಕೊಂದು ಭಯಹುಟ್ಟಿಸಿರುವ ಉಗ್ರರು ತಪ್ಪಿಸಿಕೊಳ್ಳಲಾರರು. ಅವರನ್ನು ಹುಡುಕಿ ಹುಡುಕಿ ಹೊಡೆಯುವುದು ನಮ್ಮ ಸಂಕಲ್ಪ. ದೇಶದ ಶತ್ರುಗಳಿಗೆ ತಕ್ಕ ಪಾಠ ಕಲಿಸಿಯೇ ತೀರುತ್ತೇವೆ,” ಎಂದು ಅವರು ಉಗ್ರರ ವಿರುದ್ಧ ಕಠಿಣ ನಿಲುವು ಪ್ರಕಟಿಸಿದರು.

ದೇಶದ ಎಲ್ಲಾ ನಾಗರಿಕರಿಗೆ ಗೌರವ ನೀಡುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಮೋದಿ ಪುನರುಚ್ಛರಿಸಿದರು. “ಕನ್ನಡಿಗರು ಸೇರಿದಂತೆ ಭಾರತದ ವಿವಿಧೆಡೆಯಿಂದ ಬಂದಿರುವ ಅಮಾಯಕರನ್ನು ಈ ಭಯೋತ್ಪಾದಕರು ಗುರಿಯಾಗಿಸಿದ್ದಾರೆ. ಇದು ಸಹಿಸಿಕೊಳ್ಳಲಾಗದು,” ಎಂದ ಅವರು, ಭದ್ರತಾ ಪಡೆಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ ಎಂಬ ಭರವಸೆಯನ್ನು ಜನತೆಗೆ ನೀಡಿದರು.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

3 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

3 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

3 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

3 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

3 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

3 hours ago