ಹುಬ್ಬಳ್ಳಿ: ಅಶೋಕ್ ನಗರದ ಉಪ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಪರಸ್ಪರ ಜಗಳವಾಡಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಇಬ್ಬರೂ ಕೈದಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇ 1ರಂದು ಕಾರಾಗೃಹದ ಬ್ಯಾರಕ್ ಸಂಖ್ಯೆ 10ರಲ್ಲಿ ಈ ಘಟನೆ ನಡೆದಿದ್ದು, ವಿಚಾರಣಾಧೀನ ಕೈದಿಗಳಾದ ಶಿವಾನಂದ್ ಹುಲಜೋಗಿ ಮತ್ತು ಮೈಲಾರಿ ಭರಮಣ್ಣನವರ್ ನಡುವೆ ಮಾತಿನ ಗುದ್ದಾಟ ಉಂಟಾಗಿದ್ದು, ಅದು ಹಲ್ಲೆಗೆ ಮಾರ್ಪಟ್ಟಿದೆ. ಶಿವಾನಂದ್, ಉದ್ದೇಶಪೂರ್ವಕವಾಗಿ ಮೈಲಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿ, ಬಲಭಾಗದ ಹುಬ್ಬಿಗೆ ಕಚ್ಚಿದ್ದಾನೆ ಎನ್ನಲಾಗಿದೆ.
ಈ ಘಟನೆಗೆ ಕೋಪಗೊಂಡ ಮೈಲಾರಿ ಕೂಡ ಪ್ರತಿಯಾಗಿ ಶಿವಾನಂದನನ್ನು ಕಚ್ಚಿದಿದ್ದಾನೆ. ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದ್ದು, ತಕ್ಷಣ ವೈದ್ಯಕೀಯ ನೆರವಿಗಾಗಿ ಅವರನ್ನು ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)ಗೆ ಕರೆದೊಯ್ಯಲಾಯಿತು.
ಈ ಬಗ್ಗೆ ಉಪ ಕಾರಾಗೃಹದ ಅಧೀಕ್ಷಕ ಉಳವಪ್ಪ ಹೊಸೂರು ಮಾಹಿತಿ ನೀಡಿದ್ದು, ಘಟನೆಯ ಕುರಿತಾಗಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದಿದ್ದಾರೆ. ಘಟನೆಯ ಹಿನ್ನೆಲೆ ತಿಳಿದುಕೊಳ್ಳಲು ಹೆಚ್ಚಿನ ತನಿಖೆ ನಡೆಯುತ್ತಿದೆ. ವರದಿ: ಶಿವರಾಜ್ ಪಿ.ಆರ್.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…