Latest

ಖಾಸಗಿ ಆಸ್ಪತ್ರೆಯ ಬಿಲ್‌ ಶಾಕ್: ಕೋಮಾದಲ್ಲಿದ್ದ ವ್ಯಕ್ತಿ ಐಸಿಯುನಿಂದ ನೇರವಾಗಿ ಪ್ರತಿಭಟನೆಗೆ

ಖಾಸಗಿ ಆಸ್ಪತ್ರೆಯ ದುಬಾರಿ ಬಿಲ್ ನೋಡಿ, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಮ್ಲಜನಕ ಮಾಸ್ಕ್ ಸಮೇತ ಆಸ್ಪತ್ರೆಯಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದ ಅಪರೂಪದ ಘಟನೆ ಮಧ್ಯಪ್ರದೇಶದ ರತ್ಲಂನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಘಟನೆ ವಿವರ

ದೀನದಯಾಳ್ ನಗರ ನಿವಾಸಿ ಬಂಟಿ, ಗಾಯಗಳಿಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ವೈದ್ಯರು ಬೆನ್ನು ಮೂಳೆ ಮುರಿದಿದೆ, ತಕ್ಷಣ ಅಪಾಯಕರ ಚಿಕಿತ್ಸೆಗೆ ಅಗತ್ಯವಿದೆ ಎಂದು ಹೇಳಿ, ಕುಟುಂಬದಿಂದ ₹1 ಲಕ್ಷ ಹಣ ಸಂಗ್ರಹಿಸಿ ಚಿಕಿತ್ಸೆಗೆ ಮುಂದಾದರು.

ಆದರೆ, ನಾನು ಕೋಮಾಗೆ ಹೋಗಿರಲಿಲ್ಲ, ಸಣ್ಣಪುಟ್ಟ ಗಾಯಗಳಾಗಿದ್ದವು. ಆಸ್ಪತ್ರೆಯವರು ಹಣ ಸುಲಿಗೆ ಮಾಡಲು ಮೋಸ ಮಾಡುತ್ತಿದ್ದಾರೆ ಎಂದು ಬಂಟಿ ಆರೋಪಿಸಿದ್ದಾರೆ. ಈ ಆಕ್ರೋಶದಿಂದ ಐಸಿಯುವಿನಿಂದ ಪಲಾಯನ ಮಾಡಿ, ನೇರವಾಗಿ ಆಶ್ಪತ್ರೆ ಆವರಣದಲ್ಲಿ ಜನರನ್ನು ಒಟ್ಟುಗೂಡಿಸಿ ಖಾಸಗಿ ಆಸ್ಪತ್ರೆಗಳ ಮೋಸದ ಬಗ್ಗೆ ಎಚ್ಚರಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ವೀಡಿಯೊ ವೈರಲ್

ಈ ವಿಚಿತ್ರ ಪ್ರತಿಭಟನೆಯ ವಿಡಿಯೋ Amit ಎಂಬ X (ಹಳೆಯ Twitter) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ, ಇದುವರೆಗೆ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.

ಈ ಘಟನೆ ಖಾಸಗಿ ಆಸ್ಪತ್ರೆಗಳ ದುಬಾರಿ ದರ ಮತ್ತು ರೋಗಿಗಳಿಗೆ ನೀಡುವ ಬಿಲಿಂಗ್ ಕುರಿತಂತೆ ಮತ್ತೊಮ್ಮೆ ಚರ್ಚೆ ಹುಟ್ಟಿಸಿದೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

11 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

11 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago