Latest

ಖಾಸಗಿ ಆಸ್ಪತ್ರೆಯ ಬಿಲ್‌ ಶಾಕ್: ಕೋಮಾದಲ್ಲಿದ್ದ ವ್ಯಕ್ತಿ ಐಸಿಯುನಿಂದ ನೇರವಾಗಿ ಪ್ರತಿಭಟನೆಗೆ

ಖಾಸಗಿ ಆಸ್ಪತ್ರೆಯ ದುಬಾರಿ ಬಿಲ್ ನೋಡಿ, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಮ್ಲಜನಕ ಮಾಸ್ಕ್ ಸಮೇತ ಆಸ್ಪತ್ರೆಯಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದ ಅಪರೂಪದ ಘಟನೆ ಮಧ್ಯಪ್ರದೇಶದ ರತ್ಲಂನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಘಟನೆ ವಿವರ

ದೀನದಯಾಳ್ ನಗರ ನಿವಾಸಿ ಬಂಟಿ, ಗಾಯಗಳಿಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ವೈದ್ಯರು ಬೆನ್ನು ಮೂಳೆ ಮುರಿದಿದೆ, ತಕ್ಷಣ ಅಪಾಯಕರ ಚಿಕಿತ್ಸೆಗೆ ಅಗತ್ಯವಿದೆ ಎಂದು ಹೇಳಿ, ಕುಟುಂಬದಿಂದ ₹1 ಲಕ್ಷ ಹಣ ಸಂಗ್ರಹಿಸಿ ಚಿಕಿತ್ಸೆಗೆ ಮುಂದಾದರು.

ಆದರೆ, ನಾನು ಕೋಮಾಗೆ ಹೋಗಿರಲಿಲ್ಲ, ಸಣ್ಣಪುಟ್ಟ ಗಾಯಗಳಾಗಿದ್ದವು. ಆಸ್ಪತ್ರೆಯವರು ಹಣ ಸುಲಿಗೆ ಮಾಡಲು ಮೋಸ ಮಾಡುತ್ತಿದ್ದಾರೆ ಎಂದು ಬಂಟಿ ಆರೋಪಿಸಿದ್ದಾರೆ. ಈ ಆಕ್ರೋಶದಿಂದ ಐಸಿಯುವಿನಿಂದ ಪಲಾಯನ ಮಾಡಿ, ನೇರವಾಗಿ ಆಶ್ಪತ್ರೆ ಆವರಣದಲ್ಲಿ ಜನರನ್ನು ಒಟ್ಟುಗೂಡಿಸಿ ಖಾಸಗಿ ಆಸ್ಪತ್ರೆಗಳ ಮೋಸದ ಬಗ್ಗೆ ಎಚ್ಚರಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ವೀಡಿಯೊ ವೈರಲ್

ಈ ವಿಚಿತ್ರ ಪ್ರತಿಭಟನೆಯ ವಿಡಿಯೋ Amit ಎಂಬ X (ಹಳೆಯ Twitter) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ, ಇದುವರೆಗೆ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.

ಈ ಘಟನೆ ಖಾಸಗಿ ಆಸ್ಪತ್ರೆಗಳ ದುಬಾರಿ ದರ ಮತ್ತು ರೋಗಿಗಳಿಗೆ ನೀಡುವ ಬಿಲಿಂಗ್ ಕುರಿತಂತೆ ಮತ್ತೊಮ್ಮೆ ಚರ್ಚೆ ಹುಟ್ಟಿಸಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

17 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

17 hours ago