ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕಾಣೆಯಾದ ಆಭರಣ
ಯಲಹಂಕ ನಿವಾಸಿ ಶ್ರೀನಿವಾಸ್ ಅವರು ಮೇ 1ರಂದು ತಮ್ಮ ಪತ್ನಿ ಸ್ವಪ್ನಾ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ 2ರ ಮುಂಜಾನೆ ಆಪರೇಷನ್ ಥಿಯೇಟರ್ಗೆ ಕರೆದೊಯ್ಯುವ ಮುನ್ನ ನರ್ಸಿಂಗ್ ಸಿಬ್ಬಂದಿ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಸ್ವಪ್ನಾ ಅವರು 65 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, 9 ಗ್ರಾಂ ತೂಕದ ಕಿವಿಯೋಲೆಗಳು ಹಾಗೂ 10 ಗ್ರಾಂ ತೂಕದ ಬೆಳ್ಳಿ ಕಾಲುಗಜ್ಜೆಗಳನ್ನು ಹ್ಯಾಂಡ್ಬ್ಯಾಗ್ನಲ್ಲಿ ಇಟ್ಟು ವಾರ್ಡ್ನ ಕಪಾಟಿನೊಳಗೆ ಇರಿಸಿದ್ದರು.
ಆದರೆ ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕಪಾಟು ಪರಿಶೀಲಿಸಿದಾಗ ಸುಮಾರು ₹9.68 ಲಕ್ಷ ಮೌಲ್ಯದ ಆಭರಣಗಳು ಕಾಣೆಯಾಗಿದ್ದವು.
ಸಿಸಿ ಕ್ಯಾಮೆರಾದಿಂದ ಬಯಲಾಯ್ತು ಕಳವು
ಘಟನೆ ಬಳಿಕ ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ಸಿಗದ ಕಾರಣ ಶ್ರೀನಿವಾಸ್ ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದಲ್ಲಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸಿದ ಪೊಲೀಸರು, ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಮಹಿಳಾ ಸಿಬ್ಬಂದಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ಆರೋಪಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳವು ಮಾಡಿದ ಚಿನ್ನಾಭರಣಗಳನ್ನು ಆರೋಪಿ ಬೇರೆಡೆ ಅಡಮಾನ ಇಟ್ಟಿರುವುದು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…