Categories: CrimeLatest

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ಕಾಣೆಯಾದ ಆಭರಣ

ಯಲಹಂಕ ನಿವಾಸಿ ಶ್ರೀನಿವಾಸ್ ಅವರು ಮೇ 1ರಂದು ತಮ್ಮ ಪತ್ನಿ ಸ್ವಪ್ನಾ ಅವರನ್ನು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ 2ರ ಮುಂಜಾನೆ ಆಪರೇಷನ್ ಥಿಯೇಟರ್‌ಗೆ ಕರೆದೊಯ್ಯುವ ಮುನ್ನ ನರ್ಸಿಂಗ್ ಸಿಬ್ಬಂದಿ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ವಪ್ನಾ ಅವರು 65 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, 9 ಗ್ರಾಂ ತೂಕದ ಕಿವಿಯೋಲೆಗಳು ಹಾಗೂ 10 ಗ್ರಾಂ ತೂಕದ ಬೆಳ್ಳಿ ಕಾಲುಗಜ್ಜೆಗಳನ್ನು ಹ್ಯಾಂಡ್‌ಬ್ಯಾಗ್‌ನಲ್ಲಿ ಇಟ್ಟು ವಾರ್ಡ್‌ನ ಕಪಾಟಿನೊಳಗೆ ಇರಿಸಿದ್ದರು.

ಆದರೆ ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕಪಾಟು ಪರಿಶೀಲಿಸಿದಾಗ ಸುಮಾರು ₹9.68 ಲಕ್ಷ ಮೌಲ್ಯದ ಆಭರಣಗಳು ಕಾಣೆಯಾಗಿದ್ದವು.

ಸಿಸಿ ಕ್ಯಾಮೆರಾದಿಂದ ಬಯಲಾಯ್ತು ಕಳವು

ಘಟನೆ ಬಳಿಕ ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ಸಿಗದ ಕಾರಣ ಶ್ರೀನಿವಾಸ್ ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ಮಾಹಿತಿಗಳನ್ನು ಪರಿಶೀಲಿಸಿದ ಪೊಲೀಸರು, ಇತ್ತೀಚೆಗೆ ಕೆಲಸಕ್ಕೆ ಸೇರಿದ್ದ ಮಹಿಳಾ ಸಿಬ್ಬಂದಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ವಿಚಾರಣೆ ವೇಳೆ ಆರೋಪಿ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳವು ಮಾಡಿದ ಚಿನ್ನಾಭರಣಗಳನ್ನು ಆರೋಪಿ ಬೇರೆಡೆ ಅಡಮಾನ ಇಟ್ಟಿರುವುದು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

4 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

4 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

‘ಪುಷ್ಪ’ ಸ್ಟೈಲ್‌ನಲ್ಲಿ ಗಾಂಜಾ ಸಾಗಣೆ!: ಕೋಳಿ ಆಹಾರದ ನಡುವೆ 250 ಕೆಜಿ ಗಾಂಜಾ ಪತ್ತೆ

ಬೆಂಗಳೂರು: ಪೌಲ್ಟ್ರಿ ಫೀಡ್ಸ್‌ (ಕೋಳಿಗಳಿಗೆ ಹಾಕುವ ಆಹಾರ) ಸಾಗಣೆ ನೆಪದಲ್ಲಿ ‘ಪುಷ್ಪ’ ಸಿನಿಮಾದ ಮಾದರಿಯಲ್ಲಿ ಅಂತರ್‌ರಾಜ್ಯ ಗಾಂಜಾ ಸಾಗಣೆ ಮಾಡುತ್ತಿದ್ದ…

2 days ago