Categories: CrimeLatest

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಾರ್ತಿಕ್ ಎಂಬಾತ ಜಯನಗರದಲ್ಲಿ ಮೇಕಪ್ ಕ್ಲಿನಿಕ್ ನಡೆಸುತ್ತಿದ್ದು, ಆತ ವಿವಾಹಿತನಾಗಿದ್ದಾನೆ. ಕ್ಲಿನಿಕ್ ಪ್ರಚಾರಕ್ಕಾಗಿ ಇನ್‌ಸ್ಟಾಗ್ರಾಮ್ ಮೂಲಕ ಹುಡುಕಾಟ ನಡೆಸಿದ ವೇಳೆ ಸಾಧನಾ ಶೆಟ್ಟಿ ಪರಿಚಯವಾಗಿದ್ದಳು. ಬಳಿಕ 2024ರ ಆಗಸ್ಟ್ ತಿಂಗಳಲ್ಲಿ ಜಯನಗರದ ಕಫೆಯಲ್ಲಿ ಇಬ್ಬರೂ ಭೇಟಿಯಾಗಿ ಕ್ಲಿನಿಕ್ ಪ್ರಚಾರದ ಕುರಿತು ಮಾತುಕತೆ ನಡೆಸಿದ್ದಾರೆ. ಈ ಪರಿಚಯವು ಕ್ರಮೇಣ ಆತ್ಮೀಯತೆಯಾಗಿ, ನಂತರ ವೈಯಕ್ತಿಕ ಸಂಬಂಧಕ್ಕೆ ತಿರುಗಿದೆಯೆಂದು ಹೇಳಲಾಗಿದೆ.

ಈ ಸಂಬಂಧದ ವೇಳೆ ತೆಗೆದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು, ಕಾರ್ತಿಕ್ ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಕಳುಹಿಸುವುದಾಗಿ ಸಾಧನಾ ಶೆಟ್ಟಿ ಬೆದರಿಕೆ ಹಾಕಿ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ಈ ಬೆದರಿಕೆಯಿಂದ ಭಯಗೊಂಡ ಕಾರ್ತಿಕ್, ಈಗಾಗಲೇ 5 ಲಕ್ಷ ರೂಪಾಯಿ ನಗದು, 35 ಸಾವಿರ ಮೌಲ್ಯದ ಉಂಗುರ, 70 ಸಾವಿರ ಬೆಲೆಯ ಚಿನ್ನದ ಸರ ಹಾಗೂ ಸುಮಾರು 1.5 ಲಕ್ಷ ಮೌಲ್ಯದ ಐಫೋನ್ ಅನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟಕ್ಕೇ ತೃಪ್ತಿಪಡದ ಸಾಧನಾ ಶೆಟ್ಟಿ, ಮತ್ತೊಮ್ಮೆ ಹೆಚ್ಚಿನ ಹಣಕ್ಕಾಗಿ ಒತ್ತಡ ಹಾಕಿ, ಹಣ ನೀಡದಿದ್ದಾಗ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಕಾರ್ತಿಕ್ ಪತ್ನಿಗೆ ಕಳುಹಿಸಿ ಕುಟುಂಬ ಕಲಹಕ್ಕೆ ಕಾರಣವಾಗಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ಕ್ಲಿನಿಕ್ ಬಳಿ ಬಂದು ಗಲಾಟೆ ಮಾಡಿ, ಸಂಬಂಧಿತ ಡೇಟಾವನ್ನು ಪೆನ್‌ಡ್ರೈವ್ ಸೇರಿದಂತೆ ತನ್ನ ತಾಯಿ ಮತ್ತು ಸ್ನೇಹಿತರ ಮೊಬೈಲ್‌ಗಳಲ್ಲಿ ಸಂಗ್ರಹಿಸಿದ್ದೇನೆ ಎಂದು ಬೆದರಿಕೆ ಹಾಕಿದ್ದಾಳೆ ಎಂಬುದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

3 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

6 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

11 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

11 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

1 day ago