ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾರ್ತಿಕ್ ಎಂಬಾತ ಜಯನಗರದಲ್ಲಿ ಮೇಕಪ್ ಕ್ಲಿನಿಕ್ ನಡೆಸುತ್ತಿದ್ದು, ಆತ ವಿವಾಹಿತನಾಗಿದ್ದಾನೆ. ಕ್ಲಿನಿಕ್ ಪ್ರಚಾರಕ್ಕಾಗಿ ಇನ್ಸ್ಟಾಗ್ರಾಮ್ ಮೂಲಕ ಹುಡುಕಾಟ ನಡೆಸಿದ ವೇಳೆ ಸಾಧನಾ ಶೆಟ್ಟಿ ಪರಿಚಯವಾಗಿದ್ದಳು. ಬಳಿಕ 2024ರ ಆಗಸ್ಟ್ ತಿಂಗಳಲ್ಲಿ ಜಯನಗರದ ಕಫೆಯಲ್ಲಿ ಇಬ್ಬರೂ ಭೇಟಿಯಾಗಿ ಕ್ಲಿನಿಕ್ ಪ್ರಚಾರದ ಕುರಿತು ಮಾತುಕತೆ ನಡೆಸಿದ್ದಾರೆ. ಈ ಪರಿಚಯವು ಕ್ರಮೇಣ ಆತ್ಮೀಯತೆಯಾಗಿ, ನಂತರ ವೈಯಕ್ತಿಕ ಸಂಬಂಧಕ್ಕೆ ತಿರುಗಿದೆಯೆಂದು ಹೇಳಲಾಗಿದೆ.
ಈ ಸಂಬಂಧದ ವೇಳೆ ತೆಗೆದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು, ಕಾರ್ತಿಕ್ ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಕಳುಹಿಸುವುದಾಗಿ ಸಾಧನಾ ಶೆಟ್ಟಿ ಬೆದರಿಕೆ ಹಾಕಿ ಸುಮಾರು ಒಂದೂವರೆ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.
ಈ ಬೆದರಿಕೆಯಿಂದ ಭಯಗೊಂಡ ಕಾರ್ತಿಕ್, ಈಗಾಗಲೇ 5 ಲಕ್ಷ ರೂಪಾಯಿ ನಗದು, 35 ಸಾವಿರ ಮೌಲ್ಯದ ಉಂಗುರ, 70 ಸಾವಿರ ಬೆಲೆಯ ಚಿನ್ನದ ಸರ ಹಾಗೂ ಸುಮಾರು 1.5 ಲಕ್ಷ ಮೌಲ್ಯದ ಐಫೋನ್ ಅನ್ನು ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇಷ್ಟಕ್ಕೇ ತೃಪ್ತಿಪಡದ ಸಾಧನಾ ಶೆಟ್ಟಿ, ಮತ್ತೊಮ್ಮೆ ಹೆಚ್ಚಿನ ಹಣಕ್ಕಾಗಿ ಒತ್ತಡ ಹಾಕಿ, ಹಣ ನೀಡದಿದ್ದಾಗ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಕಾರ್ತಿಕ್ ಪತ್ನಿಗೆ ಕಳುಹಿಸಿ ಕುಟುಂಬ ಕಲಹಕ್ಕೆ ಕಾರಣವಾಗಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಇದಲ್ಲದೆ, ಕ್ಲಿನಿಕ್ ಬಳಿ ಬಂದು ಗಲಾಟೆ ಮಾಡಿ, ಸಂಬಂಧಿತ ಡೇಟಾವನ್ನು ಪೆನ್ಡ್ರೈವ್ ಸೇರಿದಂತೆ ತನ್ನ ತಾಯಿ ಮತ್ತು ಸ್ನೇಹಿತರ ಮೊಬೈಲ್ಗಳಲ್ಲಿ ಸಂಗ್ರಹಿಸಿದ್ದೇನೆ ಎಂದು ಬೆದರಿಕೆ ಹಾಕಿದ್ದಾಳೆ ಎಂಬುದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಸ್ತುತ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…
ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ…