ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಭಾರೀ ವಿದ್ರೋಹಕ್ಕೆ ಕಾರಣವಾಗಿದೆ. ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ನವನಿರ್ಮಾಣ ಸೇನೆ (ಕೆಎನ್ಎಸ್) ಕಾರ್ಯಕರ್ತರು ಚಿತ್ರದುರ್ಗ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ ಒಂದು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಘಟನೆ ವಿವರ
ಚಿತ್ರದುರ್ಗ-ಹಿರಿಯೂರು ನಡುವಿನ ಗುಯಿಲಾಳು ಟೋಲ್ ಬಳಿ ಕೆಎನ್ಎಸ್ ಕಾರ್ಯಕರ್ತರು ಮಹಾರಾಷ್ಟ್ರದಿಂದ ಬಂದಿದ್ದ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ ಬಳಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೇ, ಬಸ್ ಮೇಲೆ “ಜೈ ಕರ್ನಾಟಕ” ಎಂಬ ಬರಹ ಬರೆಯುವ ಮೂಲಕ ಕನ್ನಡಿಗರ ಹಕ್ಕುಗಳ ಕುರಿತು ತಮ್ಮ ಒತ್ತಾಯವನ್ನು ದಾಖಲಿಸಿದರು.
ಹಿನ್ನೆಲೆ ಮತ್ತು ಪ್ರತಿಕ್ರಿಯೆಗಳು
ಈ ಘಟನೆ ಬೆಳಗಾವಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಪ್ರತಿಯಾಗಿ ನಡೆದಿದ್ದು, ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಸಿಡಿದೆದ್ದ ಪ್ರತಿಭಟನೆಯಾಗಿಯೇ ಗುರುತಿಸಿದೆ. ಈ ಬಗ್ಗೆ ಕರ್ನಾಟಕದ ಜನತೆ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…