Latest

ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ಅಂಕಗಳಲ್ಲಿ ಕಡಿತದ ಪ್ರಸ್ತಾವನೆ: 125 ರಿಂದ 100ಕ್ಕೆ ಇಳಿಕೆಗೆ ತಯಾರಿ

ಬೆಂಗಳೂರು, ಜುಲೈ 10: ರಾಜ್ಯ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಕಾಣಿಸುತ್ತಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಥಮ ಭಾಷಾ ಅಂಕಗಳನ್ನು ಕಡಿತ ಮಾಡುವ ಕುರಿತಾದ ಪ್ರಸ್ತಾವನೆ ಇದೀಗ ಸರ್ಕಾರದ ಗಮನಕ್ಕೆ ಬಂದಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಈ ಸಂಬಂಧ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸು ಸಲ್ಲಿಸಿದೆ.

ಪ್ರಸ್ತುತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷಾ ವಿಷಯಗಳಿಗೆ 125 ಅಂಕಗಳನ್ನಿರಿಸಲಾಗಿದ್ದು,100 ಅಂಕಗಳಿಗೆ ಇಳಿಸಲು ಮಂಡಳಿ ತೀರ್ಮಾನಿಸಿದೆ. ಇತ್ತೀಚಿನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಆಧಾರವನ್ನಾಗಿಸಿಕೊಂಡು ಈ ಬದಲಾವಣೆಗೂಡು ಕೈಗೆತ್ತಿಕೊಳ್ಳಲಾಗಿದೆ.

ಈ ಹೊಸ ಪ್ರಸ್ತಾವನೆಯ ಪ್ರಕಾರ, 100 ಅಂಕಗಳಲ್ಲಿ 80 ಅಂಕಗಳನ್ನು ಪುರಸಭೆ ಪರೀಕ್ಷೆಗೆ ಮೀಸಲಾಗಿರಲಿದ್ದು, ಉಳಿದ 20 ಅಂಕಗಳನ್ನು ಶಾಲಾ ಮಟ್ಟದಲ್ಲಿ ಶಿಕ್ಷಕರ ಮೂಲಕ ನಡೆಯುವ ಆಂತರಿಕ ಮೌಲ್ಯಮಾಪನದ ಮೂಲಕ ನಿರ್ಧರಿಸಲಾಗುವುದು.

ಇದಾದೊಂದಿಗೆ, ಈಗಿನ ಒಟ್ಟು 625 ಅಂಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು 600 ಅಂಕಗಳ ಮಾದರಿಗೆ ಪರಿವರ್ತನೆಯಾಗಲಿದ್ದು, ಇತರೆ ಎಲ್ಲಾ ವಿಷಯಗಳಂತೆ ಪ್ರಥಮ ಭಾಷೆಯೂ 100 ಅಂಕದ ತರಗತಿಗೆ ಸೇರಿಕೊಳ್ಳಲಿದೆ.

ಈ ಪ್ರಸ್ತಾಪದ ಹಿಂದೆ ಬೋರ್ಡ್‌ನ ಮಾಜಿ ಅಧ್ಯಕ್ಷ ಬಸವರಾಜೇಂದ್ರ ಅವರ ನೇತೃತ್ವದ ಸಮಿತಿಯ ಪಾತ್ರ ಪ್ರಮುಖವಾಗಿದ್ದು, ಈ ನಿರ್ಧಾರದಿಂದ ಶಿಕ್ಷಕರ ಪಾತ್ರವೂ ಬಲವಾಗಲಿದೆ. ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ, ಈಗಾಗಲೇ ಪ್ರಾರಂಭವಾಗಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹೊಸ ಮಾದರಿ ಅನ್ವಯವಾಗುವ ಸಾಧ್ಯತೆ ಇದೆ.

ಸರಕಾರದ ಅಧಿಕೃತ ನಿರ್ಧಾರವನ್ನು ಶೀಘ್ರದಲ್ಲೇ ಹೊರಪಡಿಸಲಾಗುವ ನಿರೀಕ್ಷೆಯಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago