Categories: CrimeLatest

ಬೆಂಗಳೂರು ನಗರದಲ್ಲಿ ವೇಶ್ಯಾವಾಟಿಕೆ ದಂಧೆಗೆ ಬ್ರೇಕ್: ನಾಲ್ವರು ಬಂಧನ, ಯುವತಿಯರ ರಕ್ಷಣೆ

ಬೆಂಗಳೂರು: ನಗರಾದ್ಯಂತ ಬಾಡಿಗೆ ಮನೆಗಳನ್ನು ಅಡ್ಡೆಯಾಗಿ ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದು, ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಸೋಮವಾರ ಪ್ರಕಟಣೆ ಹೊರಡಿಸಿರುವ ಅವರು, ದಂಧೆಗೆ ಬಲವಂತವಾಗಿ ತಳ್ಳಲ್ಪಟ್ಟಿದ್ದ ನಾಲ್ವರು ಯುವತಿಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪದ್ಮನಾಭನಗರ, ಆರ್.ಕೆ. ಲೇಔಟ್, ಸುಂದರನಗರ ಹಾಗೂ ಎನ್‌ಜಿಎಫ್ ಲೇಔಟ್ ಪ್ರದೇಶಗಳಲ್ಲಿನ ಬಾಡಿಗೆ ಮನೆಗಳಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ಘಟಕದ ಪೊಲೀಸರು ಸಮನ್ವಯದೊಂದಿಗೆ ದಾಳಿ ನಡೆಸಿದ್ದಾರೆ.

ಮಾಹಿತಿದಾರರಿಂದ ದೊರೆತ ಸುಳಿವಿನ ಆಧಾರದ ಮೇಲೆ ವಿವಿಧ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ದಾಳಿಯ ವೇಳೆ ಸ್ಥಳದಲ್ಲಿದ್ದ ಯುವತಿಯರನ್ನು ರಕ್ಷಿಸಿ, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಇತರರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದವರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.

ಪರಿಶೀಲನೆಯ ವೇಳೆ ಆರೋಪಿಗಳು ಹಣದಾಸೆಗೆ ಒಳಗಾಗಿ, ವೇಶ್ಯಾವಾಟಿಕೆ ಸೇವೆ ಬಯಸುವ ಗ್ರಾಹಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಿಗೆ ಕರೆಸಿಕೊಳ್ಳುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಸುಬ್ರಹ್ಮಣ್ಯಪುರ, ಜಾಲಹಳ್ಳಿ ಹಾಗೂ ಜ್ಞಾನಭಾರತಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ರಾಣೇಬೆನ್ನೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಸುರಕ್ಷಿತ

ಹಾವೇರಿ: ಬೆಂಗಳೂರಿನಿಂದ ಗದಗದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ…

6 hours ago

ದಾವಣಗೆರೆಯಲ್ಲಿ ಲಂಚ ಬಲೆಗೆ ಸರ್ವೆ ಸೂಪರ್‌ವೈಸರ್: ₹50 ಸಾವಿರ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ

ದಾವಣಗೆರೆ: ದರಖಾಸ್ತು ಜಮೀನಿನ ಪೋಡಿ ಸಂಬಂಧಿತ ತಾಂತ್ರಿಕ ವರದಿ ನೀಡಲು ₹50,000 ಲಂಚ ಸ್ವೀಕರಿಸುತ್ತಿದ್ದ ಚನ್ನಗಿರಿ ತಾಲ್ಲೂಕಿನ ಸರ್ವೆ ಸೂಪರ್‌ವೈಸರ್…

1 day ago

ಅಂಚೆ ಮತಗಳ ಮರುಎಣಿಕೆಯಲ್ಲಿ ತಿರುವು – ಶೃಂಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು

ಹೈಕೋರ್ಟ್ ನಿರ್ದೇಶನದಂತೆ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಬಿಜೆಪಿ ಅಭ್ಯರ್ಥಿ…

1 day ago

ಕಳೆದುಹೋದ ₹85 ಸಾವಿರ ಹಿಂತಿರುಗಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ – ಪ್ರಾಮಾಣಿಕತೆಗೆ ಮೆಚ್ಚುಗೆ

ತಿಪಟೂರು ಘಟಕದ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಪ್ರಾಮಾಣಿಕ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತಿಪಟೂರು ಘಟಕದ ವಾಹನ ಸಂಖ್ಯೆ 876…

1 day ago

“30 ಲಕ್ಷ ಕೊಡ್ತೀನಿ… ಬೆತ್ತಲೆ ಫೋಟೋ ಕಳುಹಿಸು!” — ರಾಮನಗರದಲ್ಲಿ ಜ್ಯೋತಿಷಿಯ ಕಿರುಕುಳ ಆರೋಪ

ರಾಮನಗರ ಜಿಲ್ಲೆಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಗೆ ಅಸಭ್ಯವಾಗಿ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಶೇಷ ಪೂಜೆಯ ಹೆಸರಿನಲ್ಲಿ…

2 days ago

ಬಾರ್ಗಿ ಅಣೆಕಟ್ಟೆ ಬೋಟ್ ದುರಂತ: ತಾಯಿ-ಮಗುವಿನ ಮನಕಲಕುವ ಚಿತ್ರ ಎಐ ಸೃಷ್ಟಿ ಎಂದು ಬಹಿರಂಗ

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು…

2 days ago