ಉತ್ತರ ಪ್ರದೇಶದ ಬರೇಲಿಯಲ್ಲಿ ಪೊಲೀಸರು ನಡೆಸಿದ ಏಕಾಏಕಿ ದಾಳಿಯಲ್ಲಿ, ಪ್ರಭಾವಶಾಲಿ ರಾಜಕೀಯ ನಾಯಕರೊಂದಿಗಿನ ಸಂಪರ್ಕ ಹೊಂದಿರುವ ಹೋಟೆಲ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಶಂಕೆ ವ್ಯಕ್ತವಾಗುತ್ತಿದ್ದ ಹಿನ್ನೆಲೆ, ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿಯಲ್ಲಿ ಹೋಟೆಲ್ನೊಳಗೆ ಅಕ್ರಮವಾಗಿ ವಾಸ್ತವ್ಯ ಹೊಂದಿದ್ದ ಏಳು ಮಹಿಳೆಯರು ಹಾಗೂ ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯರು ಪಶ್ಚಿಮ ಬಂಗಾಳ, ಜಾರ್ಖಂಡ್, ಲಕ್ನೋ, ಬುಡೌನ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಈ ಜಾಲವನ್ನು ಚಲಾಯಿಸುತ್ತಿದ್ದ ಪ್ರಮುಖ ಮಾಫಿಯಾ ಗುಂಪು ಇನ್ನೂ ಪತ್ತೆಯಾಗಿಲ್ಲ. ದಂಧೆಯ ಹಿಂದೆ ಇರುವ ಬೃಹತ್ ನೆಟ್ವರ್ಕ್ ಹಾಗೂ ಹೋಟೆಲ್ ಮಾಲಿಕನ ಪಾತ್ರದ ಬಗ್ಗೆ ತನಿಖೆ ಮುಂದುವರಿಸಲಾಗಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.
ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವುದು ಹಾಗೂ ಬಿಜೆಪಿ ನಾಯಕರ ಹೋಟೆಲ್ ಎಂಬ ಮಾಹಿತಿಯು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…