Categories: CrimeLatest

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಸಮೀಪ ಸರಕಾರಿ ಜಾಗದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಅವರು ಕಳೆದ ಸುಮಾರು 20 ವರ್ಷಗಳಿಂದ “ಪವನ್ ಕ್ಯಾಂಟಿನ್” ಹೆಸರಿನಲ್ಲಿ ಹೋಟೆಲ್ ನಡೆಸುತ್ತಿದ್ದರು ಎನ್ನಲಾಗಿದೆ. ರವಿವಾರ ಕ್ಯಾಂಟಿನ್‌ಗೆ ರಜೆ ಇರುವ ವೇಳೆ, ಅದರೊಳಗೆ ಪ್ರತ್ಯೇಕ ಕೊಠಡಿ ಹಾಗೂ ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಮೇ 10ರಂದು ಸಂಜೆ ಸುಮಾರು 5 ಗಂಟೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ (55), ನಾವೂರು ನಿವಾಸಿ ಉಸ್ಮಾನ್ (38) ಹಾಗೂ ಕಲ್ಲೇರಿ ನಿವಾಸಿ ಹೈದರ್ (45)ರನ್ನು ಬಂಧಿಸಲಾಯಿತು. ಸ್ಥಳದಲ್ಲಿದ್ದ 29 ವರ್ಷದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಪೊಲೀಸರು ದಾಳಿ ವೇಳೆ ಮೊಬೈಲ್ ಫೋನ್, ₹5 ಸಾವಿರ ನಗದು ಹಾಗೂ ಗರ್ಭನಿರೋಧಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago