ಆಳಂದ ತಾಲೂಕಿನ ಕೊರಳ್ಳಿ ಗ್ರಾಮವೂಂದರಲ್ಲಿ ಮಂಗಳವಾರ ಸಂಜೆ ಸಮಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ವ್ಯಸಗಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ಗುರುವಾರ ಬೆಳಗ್ಗೆ 11ಘಂಟೆಯ ಸುಮಾರಿಗೆ ವಿವಿಧ ಮುಖಂಡರು ಕಾರ್ಯಕರ್ತರು ಜಮಾಯಿಸಿ ಸಂಘಟನೆಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಹೆದ್ದಾರಿ ತಡೆದು ಆಳಂದ ಬಸ್ ನಿಲ್ದಾಣದ ಮುಂದೆ ಟಾಯರ್ ಬೆಂಕಿ ಹಚ್ಚಿ ಮಿಂಚಿನ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು.14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವ್ಯಸಗಿ ಕೊಲೆ ಮಾಡಿದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.ಕೂಡಲೆ ಸಂಬಂಧಿತ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಗಲ್ಲಿಗೇರಿಸಬೇಕು ಎಂದು ಜೆ.ಡಿ.ಎಸ್.ಪಕ್ಷದ ಮುಖಂಡರಾದ ಮಹೇಶ್ವರಿ ವಾಲಿಯವರು ಎಂದು ಹೇಳಿದರು. ಅತ್ಯಾಚಾರಿ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಕುಟುಂಬದ ಓರ್ವ ಸದಸ್ಯನಿಗೆ ಸರಕಾರಿ ನೌಕರಿ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು. ಸಾರಿಗೆ ಸಂಸ್ಥೆಯ ಬಸ್ ಕರ್ನಾಟಕ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್ ಲಾರಿ ಜೀಪು ಗೂಡ್ಸ್ ಅನೇಕ ವಾಹನಗಳು ಸೇರಿ ವಾಹನಗಳು ಸಂಚಾರ ಕೆಲವು ಸಮಯದ ತನಕ ಕಡಿತಗೊಂಡಿ ಪ್ರಯಾಣಿಕರು ಪರದಾಡಿದರು. ಆಳಂದ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಪಕ್ಷದ ಮುಖಂಡರು, ರಾಜಕೀಯ ಧುರೀಣರು ಮಹಿಳೆಯರು, ಪೋಲಿಸ್ ಸಿಬ್ಬಂದಿಯವರು, ತಸಿಲ್ದಾರರು ಇತರರು ಉಪಸ್ಥಿತರಿದ್ದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…