ಆಳಂದ ತಾಲೂಕಿನ ಕೊರಳ್ಳಿ ಗ್ರಾಮವೂಂದರಲ್ಲಿ ಮಂಗಳವಾರ ಸಂಜೆ ಸಮಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ವ್ಯಸಗಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ಗುರುವಾರ ಬೆಳಗ್ಗೆ 11ಘಂಟೆಯ ಸುಮಾರಿಗೆ ವಿವಿಧ ಮುಖಂಡರು ಕಾರ್ಯಕರ್ತರು ಜಮಾಯಿಸಿ ಸಂಘಟನೆಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಹೆದ್ದಾರಿ ತಡೆದು ಆಳಂದ ಬಸ್ ನಿಲ್ದಾಣದ ಮುಂದೆ ಟಾಯರ್ ಬೆಂಕಿ ಹಚ್ಚಿ ಮಿಂಚಿನ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು.14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವ್ಯಸಗಿ ಕೊಲೆ ಮಾಡಿದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.ಕೂಡಲೆ ಸಂಬಂಧಿತ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಗಲ್ಲಿಗೇರಿಸಬೇಕು ಎಂದು ಜೆ.ಡಿ.ಎಸ್.ಪಕ್ಷದ ಮುಖಂಡರಾದ ಮಹೇಶ್ವರಿ ವಾಲಿಯವರು ಎಂದು ಹೇಳಿದರು. ಅತ್ಯಾಚಾರಿ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಕುಟುಂಬದ ಓರ್ವ ಸದಸ್ಯನಿಗೆ ಸರಕಾರಿ ನೌಕರಿ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿದರು. ಸಾರಿಗೆ ಸಂಸ್ಥೆಯ ಬಸ್ ಕರ್ನಾಟಕ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್ ಲಾರಿ ಜೀಪು ಗೂಡ್ಸ್ ಅನೇಕ ವಾಹನಗಳು ಸೇರಿ ವಾಹನಗಳು ಸಂಚಾರ ಕೆಲವು ಸಮಯದ ತನಕ ಕಡಿತಗೊಂಡಿ ಪ್ರಯಾಣಿಕರು ಪರದಾಡಿದರು. ಆಳಂದ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಪಕ್ಷದ ಮುಖಂಡರು, ರಾಜಕೀಯ ಧುರೀಣರು ಮಹಿಳೆಯರು, ಪೋಲಿಸ್ ಸಿಬ್ಬಂದಿಯವರು, ತಸಿಲ್ದಾರರು ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…