Categories: CorruptionLatest

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್ ಬಿರಾದಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಪ್ರಕರಣದಲ್ಲಿ ಆರೋಪಿ ಪರವಾಗಿ ಮಧ್ಯಸ್ಥಿಕೆ ವಹಿಸಿ ಲಂಚ ಬೇಡಿಕೆ ಇಟ್ಟಿದ್ದ ವೇಳೆ, ಇಬ್ಬರೂ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇಸ್ಪೀಟ್ ಆಡುತ್ತಿದ್ದ ಆರೋಪಿಯ ಬೈಕ್ ಬಿಡುಗಡೆ ಮಾಡಲು ಸುಮಾರು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಮುತ್ತಪ್ಪ ನಾಯ್ಕರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಎಸ್‌ಪಿ ಮಹಾಲಿಂಗ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್ಐ ಭೀಮಪ್ಪ ಹಾಗೂ ಪಿಸಿ ಸಂತೋಷ್ ಬಿರಾದಾರರನ್ನು 1.70 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬಂಧಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ, ಸ್ಥಳೀಯ ಯುವಕರು ಕೆರೂರು ಪೊಲೀಸ್ ಠಾಣೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಪಿಎಸ್ಐ ಭೀಮಪ್ಪ ಅವರ ವಿರುದ್ಧ ಈಗಾಗಲೇ ಹಲವು ಆರೋಪಗಳು ಕೇಳಿಬಂದಿದ್ದವು ಎನ್ನಲಾಗಿದ್ದು, ಅವರ ಬಂಧನದಿಂದ ಜನರಲ್ಲಿ ಅಸಮಾಧಾನ ಹೊರಹೋಗಿದಂತೆ ಕಂಡಿತು.

ಇನ್ನೂ ಕೆಲವರು, ಪಿಎಸ್ಐ ವಿರುದ್ಧ ಇನ್ನಷ್ಟು ಅಕ್ರಮಗಳ ಬಗ್ಗೆ ಸಾಕ್ಷಿ ನೀಡಲು ಸಿದ್ಧವಿದ್ದೇವೆ ಎಂದು ಹೇಳಿ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿಯ ಬಂಧನದ ನಂತರ ಇಂತಹ ಸಾರ್ವಜನಿಕ ಸಂಭ್ರಮ ಅಪರೂಪವಾಗಿದ್ದು, ಇದು ಅವರ ಕಾರ್ಯವೈಖರಿಯ ಬಗ್ಗೆ ಜನರ ಅಸಮಾಧಾನವನ್ನು ತೋರಿಸುತ್ತದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago