Latest

ಹೆಂಡತಿಯನ್ನು ಕೊಂದು ಮೆದುಳು ತಿಂದ ಸೈಕೋ ಗಂಡ!

ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೆದುಳನ್ನು ತಿಂದು, ತಲೆಬುರುಡೆಯನ್ನು ಬೂದಿಯನ್ನು ಹಾಕಲು ಬಳಸಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಈ ಭೀಕರ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಅಲ್ವಾರೊ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಂಡತಿ ಮಾರಿಯಾ ಮಾಂಟೆಸೆರಾಟ್​​ಳನ್ನು ಕಳೆದ ವರ್ಷ ಮದುವೆಯಾಗಿದ್ದನು. ಈ ಭಯಾನಕ ಕೃತ್ಯವನ್ನು ನಡೆಸುತ್ತಿರುವಾಗ ಆತ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ.
ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ವಿಭಿನ್ನ ನಂಬಿಕೆ ಇರುತ್ತದೆ. ಇದು ಒಬ್ಬರ ವೈಯಕ್ತಿಕ ಆದ್ಯತೆಯನ್ನು ಅವಲಂಬಿಸಿರುತ್ತದೆ. ಆದರೆ ದೇಶಗಳಲ್ಲಿ, ದೆವ್ವ, ಸೈತಾನನನ್ನು ಆರಾಧಿಸುವ ಅಭ್ಯಾಸವನ್ನು ಇಟ್ಟುಕೊಂಡಿದ್ದಾರೆ. ಹಾಗೆಯೇ ಆಲ್ವಾರೋ ಮಾಟ-ಮಂತ್ರವನ್ನು ಅಭ್ಯಾಸ ಮಾಡುತ್ತಿದ್ದ, ಇದನ್ನು ಡೆವಿಲ್ ಆರಾಧನೆ ಎಂದೂ ಕರೆಯುತ್ತಾರೆ.
ತಾನು ಪೂಜಿಸುವ ದೆವ್ವವೇ ಈ ಕೊಲೆ ಮಾಡುವಂತೆ ಆದೇಶಿಸಿದೆ ಎಂದು ಆಲ್ವಾರೋ ಹೇಳಿದ್ದು, ಅದರಂತೆ ಜೂನ್ 29ರಂದು ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಈ ಸೈಕೋ ಹಾಕಿದ್ದನು. ಕೆಲವು ಭಾಗಗಳನ್ನು ಪರ್ವತದ ಮೇಲೆ ಎಸೆದರೆ, ಇನ್ನು ಕೆಲವು ಭಾಗಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದ.
ಅಮಲು ಇಳಿದ ಬಳಿಕ ತಾನು ಎಸಗಿರುವ ಕೃತ್ಯವನ್ನು ಕಂಡ ಆಲ್ವಾರೋ, ಎರಡು ದಿನಗಳ ನಂತರ ಅವನು ತನ್ನ ಮಲಮಗನಿಗೆ ಕರೆ ಮಾಡಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಈ ಭೀಕರ ಹತ್ಯೆಯ ಸುದ್ದಿ ಮೆಕ್ಸಿಕೋದಲ್ಲಿ ತಲ್ಲಣ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

10 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

10 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago