Latest

ಹೆಂಡತಿಯನ್ನು ಕೊಂದು ಮೆದುಳು ತಿಂದ ಸೈಕೋ ಗಂಡ!

ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೆದುಳನ್ನು ತಿಂದು, ತಲೆಬುರುಡೆಯನ್ನು ಬೂದಿಯನ್ನು ಹಾಕಲು ಬಳಸಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಈ ಭೀಕರ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಅಲ್ವಾರೊ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಂಡತಿ ಮಾರಿಯಾ ಮಾಂಟೆಸೆರಾಟ್​​ಳನ್ನು ಕಳೆದ ವರ್ಷ ಮದುವೆಯಾಗಿದ್ದನು. ಈ ಭಯಾನಕ ಕೃತ್ಯವನ್ನು ನಡೆಸುತ್ತಿರುವಾಗ ಆತ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ.
ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ವಿಭಿನ್ನ ನಂಬಿಕೆ ಇರುತ್ತದೆ. ಇದು ಒಬ್ಬರ ವೈಯಕ್ತಿಕ ಆದ್ಯತೆಯನ್ನು ಅವಲಂಬಿಸಿರುತ್ತದೆ. ಆದರೆ ದೇಶಗಳಲ್ಲಿ, ದೆವ್ವ, ಸೈತಾನನನ್ನು ಆರಾಧಿಸುವ ಅಭ್ಯಾಸವನ್ನು ಇಟ್ಟುಕೊಂಡಿದ್ದಾರೆ. ಹಾಗೆಯೇ ಆಲ್ವಾರೋ ಮಾಟ-ಮಂತ್ರವನ್ನು ಅಭ್ಯಾಸ ಮಾಡುತ್ತಿದ್ದ, ಇದನ್ನು ಡೆವಿಲ್ ಆರಾಧನೆ ಎಂದೂ ಕರೆಯುತ್ತಾರೆ.
ತಾನು ಪೂಜಿಸುವ ದೆವ್ವವೇ ಈ ಕೊಲೆ ಮಾಡುವಂತೆ ಆದೇಶಿಸಿದೆ ಎಂದು ಆಲ್ವಾರೋ ಹೇಳಿದ್ದು, ಅದರಂತೆ ಜೂನ್ 29ರಂದು ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಈ ಸೈಕೋ ಹಾಕಿದ್ದನು. ಕೆಲವು ಭಾಗಗಳನ್ನು ಪರ್ವತದ ಮೇಲೆ ಎಸೆದರೆ, ಇನ್ನು ಕೆಲವು ಭಾಗಗಳನ್ನು ಮನೆಯಲ್ಲಿ ಇರಿಸಿಕೊಂಡಿದ್ದ.
ಅಮಲು ಇಳಿದ ಬಳಿಕ ತಾನು ಎಸಗಿರುವ ಕೃತ್ಯವನ್ನು ಕಂಡ ಆಲ್ವಾರೋ, ಎರಡು ದಿನಗಳ ನಂತರ ಅವನು ತನ್ನ ಮಲಮಗನಿಗೆ ಕರೆ ಮಾಡಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಈ ಭೀಕರ ಹತ್ಯೆಯ ಸುದ್ದಿ ಮೆಕ್ಸಿಕೋದಲ್ಲಿ ತಲ್ಲಣ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago