ಜಗಿತ್ಯಾಲ (ತೆಲಂಗಾಣ): ಸ್ನೇಹಿತರಿಂದ ನಿರಂತರ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಗಿತ್ಯಾಲ ಜಿಲ್ಲೆ ಗ್ರಾಮೀಣ ಮಂಡಲದಲ್ಲಿ ನಡೆದಿದ್ದು, ಇದೊಂದು ಆತ್ಮವಿದ್ರಾವಕ ಚಿಂತೆ ಮೂಡಿಸಿದೆ.
ಕಿರುಕುಳದಿಂದ ಸಾವಿಗೆ ಶರಣಾದ ಯುವತಿಯನ್ನು ಕಾಟಿಪಲ್ಲಿ ನಿತ್ಯಾ (21) ಎಂದು ಗುರುತಿಸಲಾಗಿದೆ. ಹೈದರಾಬಾದ್ನ ರಿಷಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತ್ಯಾ, ಕಾಲೇಜು ಮತ್ತು ಹಾಸ್ಟೆಲ್ ಪಠ್ಯಜೀವನದಲ್ಲಿ ಸ್ನೇಹಿತರಾದ ವೈಷ್ಣವಿ ಮತ್ತು ಸಂಜನಾ ಅವರಿಂದ ಹನಿಸು, ನಿಂದನೆ, ತಿರಸ್ಕಾರಗಳಿಗೆ ಗುರಿಯಾಗುತ್ತಿದ್ದಳು ಎನ್ನಲಾಗಿದೆ.
ನಿತ್ಯಾ ಮೇಲಿನ ಈ ಕಿರುಕುಳ ಅವಳ ಮಾನಸಿಕ ಸ್ಥಿತಿಗೆ ಹಾನಿ ಮಾಡಿದ್ದು, ಓದಿನಲ್ಲಿಯೂ ಹಿಂದಿಕ್ಕುವಂತಾಗಿದೆ. ಈ ಮಾನಸಿಕ ಆಘಾತದ ಮಧ್ಯೆ ಜುಲೈ 1ರಂದು ನಿತ್ಯಾ ತನ್ನ ಮನೆಗೆ ಬಂದಿದ್ದಳು. ಜುಲೈ 2ರಂದು ಮನೆಯವರು ಹೊರಗೆ ಇದ್ದ ಸಂದರ್ಭ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅಸ್ವಸ್ಥಗೊಂಡ ನಿತ್ಯಾಳನ್ನು ಕೂಡಲೇ ಜಗಿತ್ಯಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕರೀಂನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜುಲೈ 5 ರಂದು ಬೆಳಿಗ್ಗೆ ನಿತ್ಯಾ ಮೃತಪಟ್ಟಳು.
ಈ ಕುರಿತು ನಿತ್ಯಾಳ ತಂದೆ ಕಾಟಿಪಲ್ಲಿ ತಿರುಪತಿ ನೀಡಿದ ದೂರಿನಡಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ತನಿಖೆ ನಡೆಸುತ್ತಿರುವ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಘಟನೆ ಹೈದರಾಬಾದ್ನಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಮಾನಸಿಕ ಕಿರುಕುಳದ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಅಗತ್ಯತೆಯ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…