Latest

ಚಿತ್ರದುರ್ಗದಲ್ಲಿ ಜುಲೈ 23ರಂದು ವಾಹನಗಳ ಬಹಿರಂಗ ಹರಾಜು.

ಚಿತ್ರದುರ್ಗ, ಜುಲೈ 19: ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವಶದಲ್ಲಿರುವ ಅನೇಕ ವಾಹನಗಳನ್ನು ಜುಲೈ 23ರಂದು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಈಚೆಗೆ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣಗಳ ತನಿಖೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ ವಾಹನಗಳನ್ನು ಸಂಬಂಧಿತ ಮಾಲೀಕರು ಯಾವುದೇ ಹಕ್ಕು ಸಾಧನೆ ಮಾಡದೇ ಇದ್ದ ಕಾರಣದಿಂದಾಗಿ, ಮೋಟಾರ್ ವಾಹನ ಕಾಯ್ದೆಯ ನಿಯಮಾನುಸಾರ, ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 23 ಮೋಟಾರ್ ಸೈಕಲ್, 2 ಆಟೋ ರಿಕ್ಷಾ ಮತ್ತು 1 ಆಲ್ಟೋ ಕಾರು ಸೇರಿದಂತೆ ಒಟ್ಟು 26 ವಾಹನಗಳನ್ನು ಹರಾಜುಮಾಡಲಾಗುತ್ತದೆ.

ಈ ಹರಾಜಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮೇಲಾಧಿಕಾರಿಗಳ ಅನುಮತಿ ಮತ್ತು ನ್ಯಾಯಾಲಯದ ಅನುಮೋದನೆ ಪಡೆದುಕೊಳ್ಳಲಾಗಿದೆ. ಹರಾಜು ಪ್ರಕ್ರಿಯೆ ಜುಲೈ 23 ಬುಧವಾರದಂದು ಪೊಲೀಸ್ ಠಾಣೆಯ ಆವರಣದಲ್ಲಿ ನಡೆಯಲಿದೆ.

ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ರೂ.10,000 ನಗದು ಮುಂಗಡವಾಗಿ ಪಾವತಿಸಿ ಟೋಕನ್ ಪಡೆದುಕೊಳ್ಳಬೇಕಾಗುತ್ತದೆ. ಹೆಚ್ಚಿನ ಮಾಹಿತಿಗೆ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಅವರನ್ನು ಈ ಕೆಳಗಿನ ಮೊಬೈಲ್ ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು:

📱 94808 03131 / 94808 03148

ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಇಲಾಖೆ ಮನವಿ ಮಾಡಿದೆ

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

1 hour ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago