Latest

ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ – ಪೊಲೀಸ್ ಪೇದೆಯ ನಿಂದನೆಗೆ ಸಾರ್ವಜನಿಕನ ತಿರುಗೇಟು!”

ಚಿತ್ರದುರ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಾಹನ ಪಾರ್ಕಿಂಗ್ ವಿಚಾರವಾಗಿ ನಡೆದ ಘಟನೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸ್ ಪೇದೆ ಬಿದರಪ್ಪ ರವಿ ಹಾಗೂ ಸಾರ್ವಜನಿಕನೊಬ್ಬರ ನಡುವೆ ಶುರುವಾದ ಚರ್ಚೆ ಕೆಲವೇ ಕ್ಷಣಗಳಲ್ಲಿ ಉಗ್ರ ಸ್ವರೂಪ ಪಡೆಯಿತು.

ಸಾರ್ವಜನಿಕನು ತನ್ನ ವಾಹನವನ್ನು ನಿಲುಗಡೆ ಮಾಡುತ್ತಿದ್ದ ಸಂದರ್ಭ, ಪೊಲೀಸ್ ಪೇದೆಯು  ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಮಾತಿಗೆ ಮಾತು ಬೆಳೆದು ವಾಗ್ವಾದ ತೀವ್ರಗೊಂಡಿದೆ. ಈ ಸಂದರ್ಭ, ಪೇದೆ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾನೆ ಎಂದು ದೃಶ್ಯಾವಳಿಗಳು ದೃಢಪಡಿಸಿವೆ.

ಅದಕ್ಕೆ ಪ್ರತಿಯಾಗಿ, ಸಾರ್ವಜನಿಕನು ತನ್ನ ಅಪಮಾನವನ್ನು ತಾಳದೆ ಪೇದೆಯ ವಿರುದ್ಧ ಗಂಭೀರವಾಗಿ ಪ್ರಶ್ನೆ ಎಬ್ಬಿಸಿದ್ದಾನೆ. ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರೂ ಈ ಘಟನೆಯನ್ನು ಗಮನಿಸಿ, ಪೇದೆಯ ವರ್ತನೆಯನ್ನು ಖಂಡಿಸಿದರು. ಸಾರ್ವಜನಿಕರ ಒತ್ತಾಯದ ಮೇರೆಗೆ, ಬಿದರಪ್ಪ ರವಿ ತನ್ನ ತಪ್ಪು ಅರಿತು, ಸಾರ್ವಜನಿಕರ ಮುಂದೆ ಕೈ ಮುಗಿದು ಕ್ಷಮೆ ಯಾಚಿಸಿದರು.

ಈ ಘಟನೆ ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಸಿಬ್ಬಂದಿಯ ವರ್ತನೆ ಕುರಿತು ಉನ್ನತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago