Latest

ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ – ಪೊಲೀಸ್ ಪೇದೆಯ ನಿಂದನೆಗೆ ಸಾರ್ವಜನಿಕನ ತಿರುಗೇಟು!”

ಚಿತ್ರದುರ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಾಹನ ಪಾರ್ಕಿಂಗ್ ವಿಚಾರವಾಗಿ ನಡೆದ ಘಟನೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸ್ ಪೇದೆ ಬಿದರಪ್ಪ ರವಿ ಹಾಗೂ ಸಾರ್ವಜನಿಕನೊಬ್ಬರ ನಡುವೆ ಶುರುವಾದ ಚರ್ಚೆ ಕೆಲವೇ ಕ್ಷಣಗಳಲ್ಲಿ ಉಗ್ರ ಸ್ವರೂಪ ಪಡೆಯಿತು.

ಸಾರ್ವಜನಿಕನು ತನ್ನ ವಾಹನವನ್ನು ನಿಲುಗಡೆ ಮಾಡುತ್ತಿದ್ದ ಸಂದರ್ಭ, ಪೊಲೀಸ್ ಪೇದೆಯು  ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಮಾತಿಗೆ ಮಾತು ಬೆಳೆದು ವಾಗ್ವಾದ ತೀವ್ರಗೊಂಡಿದೆ. ಈ ಸಂದರ್ಭ, ಪೇದೆ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾನೆ ಎಂದು ದೃಶ್ಯಾವಳಿಗಳು ದೃಢಪಡಿಸಿವೆ.

ಅದಕ್ಕೆ ಪ್ರತಿಯಾಗಿ, ಸಾರ್ವಜನಿಕನು ತನ್ನ ಅಪಮಾನವನ್ನು ತಾಳದೆ ಪೇದೆಯ ವಿರುದ್ಧ ಗಂಭೀರವಾಗಿ ಪ್ರಶ್ನೆ ಎಬ್ಬಿಸಿದ್ದಾನೆ. ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರೂ ಈ ಘಟನೆಯನ್ನು ಗಮನಿಸಿ, ಪೇದೆಯ ವರ್ತನೆಯನ್ನು ಖಂಡಿಸಿದರು. ಸಾರ್ವಜನಿಕರ ಒತ್ತಾಯದ ಮೇರೆಗೆ, ಬಿದರಪ್ಪ ರವಿ ತನ್ನ ತಪ್ಪು ಅರಿತು, ಸಾರ್ವಜನಿಕರ ಮುಂದೆ ಕೈ ಮುಗಿದು ಕ್ಷಮೆ ಯಾಚಿಸಿದರು.

ಈ ಘಟನೆ ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಸಿಬ್ಬಂದಿಯ ವರ್ತನೆ ಕುರಿತು ಉನ್ನತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago