ಚಿತ್ರದುರ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಾಹನ ಪಾರ್ಕಿಂಗ್ ವಿಚಾರವಾಗಿ ನಡೆದ ಘಟನೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸ್ ಪೇದೆ ಬಿದರಪ್ಪ ರವಿ ಹಾಗೂ ಸಾರ್ವಜನಿಕನೊಬ್ಬರ ನಡುವೆ ಶುರುವಾದ ಚರ್ಚೆ ಕೆಲವೇ ಕ್ಷಣಗಳಲ್ಲಿ ಉಗ್ರ ಸ್ವರೂಪ ಪಡೆಯಿತು.
ಸಾರ್ವಜನಿಕನು ತನ್ನ ವಾಹನವನ್ನು ನಿಲುಗಡೆ ಮಾಡುತ್ತಿದ್ದ ಸಂದರ್ಭ, ಪೊಲೀಸ್ ಪೇದೆಯು ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಮಾತಿಗೆ ಮಾತು ಬೆಳೆದು ವಾಗ್ವಾದ ತೀವ್ರಗೊಂಡಿದೆ. ಈ ಸಂದರ್ಭ, ಪೇದೆ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾನೆ ಎಂದು ದೃಶ್ಯಾವಳಿಗಳು ದೃಢಪಡಿಸಿವೆ.
ಅದಕ್ಕೆ ಪ್ರತಿಯಾಗಿ, ಸಾರ್ವಜನಿಕನು ತನ್ನ ಅಪಮಾನವನ್ನು ತಾಳದೆ ಪೇದೆಯ ವಿರುದ್ಧ ಗಂಭೀರವಾಗಿ ಪ್ರಶ್ನೆ ಎಬ್ಬಿಸಿದ್ದಾನೆ. ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರೂ ಈ ಘಟನೆಯನ್ನು ಗಮನಿಸಿ, ಪೇದೆಯ ವರ್ತನೆಯನ್ನು ಖಂಡಿಸಿದರು. ಸಾರ್ವಜನಿಕರ ಒತ್ತಾಯದ ಮೇರೆಗೆ, ಬಿದರಪ್ಪ ರವಿ ತನ್ನ ತಪ್ಪು ಅರಿತು, ಸಾರ್ವಜನಿಕರ ಮುಂದೆ ಕೈ ಮುಗಿದು ಕ್ಷಮೆ ಯಾಚಿಸಿದರು.
ಈ ಘಟನೆ ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಸಿಬ್ಬಂದಿಯ ವರ್ತನೆ ಕುರಿತು ಉನ್ನತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿದೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…